1:08 AM Thursday6 - March 2025
ಬ್ರೇಕಿಂಗ್ ನ್ಯೂಸ್
Tourism | ಕೊಡವ ಹೆರಿಟೇಜ್ ಕೇಂದ್ರವನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿ: ಪ್ರವಾಸೋದ್ಯಮ ಸಚಿವ… Primary Education | ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ವೃದ್ದಿಗೆ ಕಲಿಕಾ ದೀಪ, ಜ್ಞಾನ… BJP v/s Cong | ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ದಕ್ಷಿಣ ಭಾರತದ… Womens Day | ಮಹಿಳಾಸ್ನೇಹಿ ಗ್ರಾಪಂ ಅಭಿಯಾನ, ಮಹಿಳಾ ಗ್ರಾಮಸಭೆ: ಮಾರ್ಚ್‌ 8… Protest | ಹಕ್ಕುಪತ್ರಕ್ಕಾಗಿ ಪಾದಯಾತ್ರೆ: ಗ್ರಾಮದ ನ್ಯಾಯಕ್ಕಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಏಕಾಂಗಿ… Budget Session | 26 ಲಕ್ಷ ನಕಲಿ ಕಾರ್ಡ್ ಗಳ ರದ್ದು: ಸದನದಲ್ಲಿ… Budget Session | ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ… Forest Minister | ವಾಯುಪಡೆ ಸ್ವಾಧೀನದ ಪೀಣ್ಯ, ಜಾರಕಬಂಡೆ ಅರಣ್ಯಭೂಮಿ ಮರುವಶಕ್ಕೆ: ಸಚಿವ… Budget Session | ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕರ್ತವ್ಯ ನಿರ್ವಹಿಸಲು ಎಲ್ಲ… Yakshagana | ಯಕ್ಷಗಾನ ಪ್ರದರ್ಶನಕ್ಕೆ ಧ್ವನಿವರ್ಧಕ ಅನುಮತಿ ಸರಳಗೊಳಿಸಲಾಗುವುದು: ಡಿಸಿಎಂ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಬಿಹಾರದ ಚುನಾವಣೆ ಪ್ರಣಾಳಿಕೆಯಂತಿದೆ: ಕೇಂದ್ರ ಬಜೆಟ್ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿ

01/02/2025, 18:14

ಬೆಳಗಾವಿ(reporterkarnataka.com): ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.
ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ.
ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು