2:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

01/02/2025, 21:43

ಮಂಗಳೂರು(reporterkarnataka.com): ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ. ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ. ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು