10:24 PM Saturday9 - August 2025
ಬ್ರೇಕಿಂಗ್ ನ್ಯೂಸ್
ಅತ್ತೂರುಕೊಲ್ಲಿ ಅದಿವಾಸಿಗಳ ಪರ ಹೋರಾಟ: ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ… Bangalore | ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ: ವಂದೇ ಭಾರತ್ ಎಕ್ಸ್ ಪ್ರೆಸ್… ರಾಹುಲ್‌ ಗಾಂಧಿಯದ್ದು ಠುಸ್‌ ಪಟಾಕಿ, ಮತದಾರರ ಪಟ್ಟಿ ತಯಾರಿಯಲ್ಲಿ ಪ್ರಧಾನಿ ಅಥವಾ ಬಿಜೆಪಿಯ… ಧರ್ಮಸ್ಥಳದಲ್ಲಿ ಯೂಟ್ಯೂಬರ್ ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಕೊಕ್ಕಡದಲ್ಲಿ ಬಂಧನ ಆಲಮಟ್ಟಿ ಡ್ಯಾಮ್ ಎತ್ತರ 524 ಮೀಟರ್‌ಗೆ ಹೆಚ್ಚಿಸುವುದು ಕರ್ನಾಟಕದ ಹಕ್ಕು: ಕೇಂದ್ರ ಜಲಶಕ್ತಿ… Chikkamagaluru | ಕಾಫಿನಾಡಲ್ಲಿ ನಿಲ್ಲದ ಕಾಡಾನೆ ಉಪಟಳ: ಹೆದ್ದಾರಿ, ಕಾಫಿ ತೋಟದಲ್ಲಿಯೂ ದಾಂಧಲೆ ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಅಳಿವಿನoಚಿನಲ್ಲಿರುವ ನೀರು ನಾಯಿಗಳ ಕಳ್ಳಬೇಟೆ: ಪ್ರಾಣಿ ಪ್ರಿಯರಿಂದ ಕಾರ್ಯಾಚರಣೆ ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು…

ಇತ್ತೀಚಿನ ಸುದ್ದಿ

ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆ ಇಲ್ಲ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

01/02/2025, 21:43

ಮಂಗಳೂರು(reporterkarnataka.com): ಕೇಂದ್ರದ ಬಜೆಟ್‌ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಉದ್ಯೋಗ ಸೃಷ್ಟಿಗೆ ಕೆಲವು ಘೋಷಣೆಗಳನ್ನು ಮಾಡಿದ್ದಾರೆ. ಕಳೆದ ಹತ್ತ ವರ್ಷಗಳಿಂದಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗವುದು ಎಂದು ಹೇಳುತ್ತಾ ಬಂದಿದ್ದಾರೆ. ಅದು ಘೋಷಣೆಯಾಗಿ ಮಾತ್ರ ಉಳಿದಿದೆ. ನಿರುದ್ಯೋಗ ಸಮಸ್ಯೆ ಹೆಚ್ಚುತ್ತಲೇ ಇದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಪ್ರತಿಕ್ರಿಯಿಸಿದ್ದಾರೆ.
12 ಲಕ್ಷ ರೂ.ವರೆಗೆ ಯಾವುದೇ ತೆರಿಗೆ ಇಲ್ಲ ಮತ್ತು ಕೆಲವೊಂದು ತೆರಿಗೆ ವಿನಾಯಿತಿ ಮಾಡಿರುವುದು ಮಾತ್ರ ಸ್ವಾಗತಾರ್ಹ. ಕರ್ನಾಟಕದ ದೃಷ್ಟಿಯಿಂದ ಇದೊಂದು ನಿರಾಶದಾಯಕ ಆಯವ್ಯಯ. ಕಳೆದ 10 ವರ್ಷಗಳಿಂದಲೂ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ. ಬಡವರು, ರೈತರು, ಯುವಕರು, ಮಹಿಳೆಯರ ಬಾಳು ಹಸನಾಗಿಸುವ ಮಹತ್ವದ ಯಾವುದೇ ಯೋಜನೆಗಳಲ್ಲಿಲ್ಲ. ನಮ್ಮಕರಾವಳಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ಇಲ್ಲಿನ ಸಂಸದರು ಸಚಿವರ ಮೇಲೆ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಅವರು ಆಯ್ಕೆಯಾಗಿದ್ದರೂ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು