10:49 AM Thursday25 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

02/02/2025, 16:47

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸ್ನೇಹಿತ ಸಾಲ ತೀರಿಸದ ಹಿನ್ನೆಲೆಯಲ್ಲಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ತನ್ನ ಹೆಸರಲ್ಲಿ ಸ್ನೇಹಿತನಿಗೆ ಸಿದ್ದೇಶ್ ಬ್ಯಾಂಕ್ ಸಾಲಕೊಡಿಸಿದ್ದರು. ಆದರೆ ಸ್ನೇಹಿತ ಸಾಲ ತೀರಿಸಲಿಲ್ಲ. ಇದರಿಂದ ಮನನೊಂದ
ನಂಜನಗೂಡು ತಾಲೂಕು ಮುಲ್ಲೂಪುರ ಗ್ರಾಮದ ಸಿದ್ದೇಶ್ 40 ಮರಕ್ಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರು ತಾಲೂಕು ದಂಡಿಕೆರೆ ಗ್ರಾಮದ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ನೇಹಿತ ಮಣಿಕಂಠ ಎಂಬಾತನಿಗೆ ಖಾಸಗಿ ಬ್ಯಾಂಕ್‌ನಲ್ಲಿ ಕಾರು ಸಾಲ
ಸಿದ್ದೇಶ್ ಕೊಡಿಸಿದ್ದರು.
ಜೊತೆಗೆ ತನ್ನ ಹೆಸರಿನಲ್ಲಿ 2 ಲಕ್ಷ ನಗದು ಸಾಲ ಸಹ ಕೊಡಿಸಿದ್ದ ಎನ್ನಲಾಗಿದ್ದು, ಮಣಿಕಂಠ ಕೇವಲ ಎರಡು ಕಂತು ಕಟ್ಟಿ ಸುಮ್ಮನಾಗಿದ್ದರು ಎನ್ನಲಾಗಿದೆ.

ಸಾಲ ತೆಗೆಸಿಕೊಂಡಿದ್ದ ಸ್ನೇಹಿತ ಸಾಲ‌ ತೀರಿಸದ ಕಾರಣ ಖಾಸಗಿ ಬ್ಯಾಂಕ್ ಸಿದ್ದೇಶ್‌ ಗೆ ಸಾಲ ತೀರಿಸುವಂತೆ ಒತ್ತಾಯಿಸಿತ್ತು ಎನ್ನಲಾಗಿದೆ

ಇದರಿಂದ ಮನನೊಂದು ಸಾಲ ಕೊಡಿಸಿದ್ದ ಸಿದ್ದೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಆತ್ಮಹತ್ಯೆಗೂ ಮುಂಚೆ ಸೆಲ್ಫಿ ವಿಡಿಯೋ ಮಾಡಿ ಸಿ ಎಂ ಸಿದ್ದರಾಮಯ್ಯಗೆ ಮನವಿ ಮಾಡಿಕೊಂಡಿರುವ ಸಿದ್ದೇಶ್ ತನ್ನ ಪತ್ನಿ, ಮಕ್ಕಳು, ತಂದೆ, ತಾಯಿ ಹಾಗೂ ಸಹೋದರರಲ್ಲಿ ಕ್ಷಮೆ ಯಾಚಿಸಿರುವ ಘಟನೆ ಮನ ಕಲಕುವಂತಿದೆ

ಘಟನೆಗೆ ಸಂಬಂಧಿಸಿದಂತೆ ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು