2:30 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಕೋಡಿಕಲ್ 17ನೇ ಮೇಯರ್ ವಾರ್ಡ್ ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸಮಾಜ ಭವನ ಉದ್ಘಾಟನೆ

02/02/2025, 16:54

ಸುರತ್ಕಲ್ (reporterkarnataka.com): ಮಂಗಳೂರು ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ಭಾನುವಾರ ನಡೆಯಿತು.


ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಾತನಾಡಿ,
ಬಾಬಾ ಸಾಹೇಬ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಸಮಾಜದಲ್ಲಿ ಶಿಕ್ಷಣದೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಅವರ ಹೆಸರಿನಲ್ಲಿ ನಿರ್ಮಾಣವಾದ ಈ ಸಮಾಜ ಭವನದಲ್ಲಿ ಶಿಕ್ಷಣ ತರಬೇತಿ,ಉದ್ಯೋಗ, ಮತ್ತಿತರ ತರಬೇತಿಗಳು,
ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಪ್ರಯೋಜನವಾಗಲಿ ಎಂದರು. ಇದೇ ಸಂದರ್ಭ ಭವನವನ್ನು ಪೂರ್ಣಗೊಳಿಸಲು ಬೇಕಾದ ಕ್ರಮ ಕೈಗೊಂಡ ಮೇಯರ್ ಮನೋಜ್ ಕುಮಾರ್ ಅವರನ್ನು ಅಭಿನಂದಿಸಿದರು.
ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಮಾಜ ಭವನ ನಿರ್ಮಾಣಕ್ಕೆ ಹಲವು ಅಡ್ಡಿ ಆತಂಕ ಎದುರಾಗಿತ್ತು.ತಾನು ಪಾಲಿಕೆ ಸದಸ್ಯನಾದ ಬಳಿಕ
ಪೂರ್ಣಗೊಳಿಸಲು ಕೊರೊನಾ ಅಡಚಣೆ ಹಾಗೂ ಆರ್ಥಿಕ ಸಮಸ್ಯೆ ಮತ್ತೆ ಎದುರಾಗಿತ್ತು.ಸಮಾಜ ಕಲ್ಯಾಣ ಇಲಾಖೆಯಿಂದಲೂ ಅನುದಾನ ತಾಂತ್ರಿಕ ಕಾರಣದಿಂದ ಸಿಗಲಿಲ್ಲ.ಕೊನೆಗೆ ಪಾಲಿಕೆ ಸಾಮಾನ್ಯ ನಿಧಿ ಹಾಗೂ ಮೀಸಲು 24.10 ನಿಧಿಯಿಂದ ಹಣ ಒದಗಿಸಿ ಇದೀಗ ಪೂರ್ಣಗೊಳಿಸಲಾಗಿದೆ. ಪ.ಜಾ, ಪಂಗಡ ,ಇತರ ಪಂಗಡ ಹಾಗೂ ಇತರರಿಗೂ ಈ ಸಮಾಜ ಭವನದಲ್ಲಿ ಕಡಿಮೆ ಶುಲ್ಕದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗುವುದು.ಇದರಿಂದ ಪಾಲಿಕೆಗೂ ಆದಾಯ ಬರುವಂತಾಗುತ್ತದೆ.ಸಮಾಜ ಮುಖೀ ಚಟುವಟಿಕೆಗೂ ಈ ಭವನ ಸದುಪಯೋಗವಾಗಲಿ ಎಂದು ಹಾರೈಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಯಲಕ್ಷ್ಮಿ ,ಕಿರಣ್ ಕುಮಾರ್ ಕೋಡಿಕಲ್
ಕೋಡಿಕಲ್ ಎಸ್ ಎನ್ ಡಿ ಪಿ ಮಂದಿರದ
ಸಂಚಾಲಕರಾದ ಪುರುಷೋತ್ತಮ್ ಪೂಜಾರಿ, ಮುಂಡಾಲ ಯುವ ವೇದಿಕೆಯ ಪ್ರದೀಪ್ ಕಾಪಿಕಾಡ್, ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿಯ ಚಂದ್ರಕುಮಾರ್ ,ಡಾ. ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ಚಂದ್ರಹಾಸ್ ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು