3:38 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೋಡಿಕಲ್ 17ನೇ ಮೇಯರ್ ವಾರ್ಡ್ ನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸಮಾಜ ಭವನ ಉದ್ಘಾಟನೆ

02/02/2025, 16:54

ಸುರತ್ಕಲ್ (reporterkarnataka.com): ಮಂಗಳೂರು ಮೇಯರ್ ಮನೋಜ್ ಕುಮಾರ್ ಅವರು ಪ್ರತಿನಿಧಿಸುತ್ತಿರುವ ವಾರ್ಡ್ 17ರ ಕೋಡಿಕಲ್ ಶಾಲೆಯ ಬಳಿ ಸುಸಜ್ಜಿತ ಡಾ.ಬಿ.ಆರ್ ಅಂಬೇಡ್ಕರ್ ಭವನದ ಉದ್ಘಾಟನೆ ಭಾನುವಾರ ನಡೆಯಿತು.


ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಉದ್ಘಾಟಿಸಿ ಮಾತನಾಡಿ,
ಬಾಬಾ ಸಾಹೇಬ್ ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆದಾಗ ಸಮಾಜದಲ್ಲಿ ಶಿಕ್ಷಣದೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗುತ್ತದೆ. ಅವರ ಹೆಸರಿನಲ್ಲಿ ನಿರ್ಮಾಣವಾದ ಈ ಸಮಾಜ ಭವನದಲ್ಲಿ ಶಿಕ್ಷಣ ತರಬೇತಿ,ಉದ್ಯೋಗ, ಮತ್ತಿತರ ತರಬೇತಿಗಳು,
ಆರ್ಥಿಕವಾಗಿ ಹಿಂದುಳಿದ ಸಮಾಜಕ್ಕೆ ಪ್ರಯೋಜನವಾಗಲಿ ಎಂದರು. ಇದೇ ಸಂದರ್ಭ ಭವನವನ್ನು ಪೂರ್ಣಗೊಳಿಸಲು ಬೇಕಾದ ಕ್ರಮ ಕೈಗೊಂಡ ಮೇಯರ್ ಮನೋಜ್ ಕುಮಾರ್ ಅವರನ್ನು ಅಭಿನಂದಿಸಿದರು.
ಮನೋಜ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಮಾಜ ಭವನ ನಿರ್ಮಾಣಕ್ಕೆ ಹಲವು ಅಡ್ಡಿ ಆತಂಕ ಎದುರಾಗಿತ್ತು.ತಾನು ಪಾಲಿಕೆ ಸದಸ್ಯನಾದ ಬಳಿಕ
ಪೂರ್ಣಗೊಳಿಸಲು ಕೊರೊನಾ ಅಡಚಣೆ ಹಾಗೂ ಆರ್ಥಿಕ ಸಮಸ್ಯೆ ಮತ್ತೆ ಎದುರಾಗಿತ್ತು.ಸಮಾಜ ಕಲ್ಯಾಣ ಇಲಾಖೆಯಿಂದಲೂ ಅನುದಾನ ತಾಂತ್ರಿಕ ಕಾರಣದಿಂದ ಸಿಗಲಿಲ್ಲ.ಕೊನೆಗೆ ಪಾಲಿಕೆ ಸಾಮಾನ್ಯ ನಿಧಿ ಹಾಗೂ ಮೀಸಲು 24.10 ನಿಧಿಯಿಂದ ಹಣ ಒದಗಿಸಿ ಇದೀಗ ಪೂರ್ಣಗೊಳಿಸಲಾಗಿದೆ. ಪ.ಜಾ, ಪಂಗಡ ,ಇತರ ಪಂಗಡ ಹಾಗೂ ಇತರರಿಗೂ ಈ ಸಮಾಜ ಭವನದಲ್ಲಿ ಕಡಿಮೆ ಶುಲ್ಕದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಲಾಗುವುದು.ಇದರಿಂದ ಪಾಲಿಕೆಗೂ ಆದಾಯ ಬರುವಂತಾಗುತ್ತದೆ.ಸಮಾಜ ಮುಖೀ ಚಟುವಟಿಕೆಗೂ ಈ ಭವನ ಸದುಪಯೋಗವಾಗಲಿ ಎಂದು ಹಾರೈಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರಾದ ಜಯಲಕ್ಷ್ಮಿ ,ಕಿರಣ್ ಕುಮಾರ್ ಕೋಡಿಕಲ್
ಕೋಡಿಕಲ್ ಎಸ್ ಎನ್ ಡಿ ಪಿ ಮಂದಿರದ
ಸಂಚಾಲಕರಾದ ಪುರುಷೋತ್ತಮ್ ಪೂಜಾರಿ, ಮುಂಡಾಲ ಯುವ ವೇದಿಕೆಯ ಪ್ರದೀಪ್ ಕಾಪಿಕಾಡ್, ಪರಿಶಿಷ್ಟ ಜಾತಿ ಹಿತರಕ್ಷಣಾ ಸಮಿತಿಯ ಚಂದ್ರಕುಮಾರ್ ,ಡಾ. ಬಿ ಆರ್ ಅಂಬೇಡ್ಕರ್ ಸೇವಾ ಸಮಿತಿಯ ಚಂದ್ರಹಾಸ್ ಸ್ಥಳೀಯರು,ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು