6:59 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಸಚಿವ ಖಂಡ್ರೆ ಸೂಚನೆ

03/02/2025, 09:28

ಬೆಂಗಳೂರು(reporterkarnataka.com): ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು