1:03 PM Wednesday5 - February 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ… ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ… ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;… ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ… ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಇತ್ತೀಚಿನ ಸುದ್ದಿ

ಪಟ್ಟಾ ಜಮೀನು ಹೊಂದಿರುವವರ ಅರಣ್ಯ ಹಕ್ಕು ಅರ್ಜಿ ಪರಿಶೀಲನೆಗೆ ಸಚಿವ ಖಂಡ್ರೆ ಸೂಚನೆ

03/02/2025, 09:28

ಬೆಂಗಳೂರು(reporterkarnataka.com): ಅರಣ್ಯ ಹಕ್ಕು ಕಾಯಿದೆ ಅಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿರುವ ಸಚಿವರು, ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿಸೆಂಬರ್ 13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿಸಿರುವ ಸಚಿವರು, ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲಿಕತ್ವ ಹೊಂದಿರುವವರೂ ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮ ವಹಿಸಲು ಸೂಚಿಸಿದ್ದಾರೆ.
ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲೀ, ತಮ್ಮ ಕುಟುಂಬದ ಸದಸ್ಯರಿಗಾಗಲೀ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ಮತ್ತು ‘ನಮೂನೆ-ಎ’ಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು