7:58 PM Saturday25 - April 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್…

ಇತ್ತೀಚಿನ ಸುದ್ದಿ

ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಬಗ್ಗೆ ಹೇಳಿದ್ದೇನು?

03/02/2025, 16:59

ಮಂಗಳೂರು(reporterkarnataka.com): ಈಗ ನಾನಿರುವ ಪೋಸ್ಟ್‌ನಲ್ಲಿ ಸಂತೋಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೇ ಇದ್ರೂ ಸಂತೋಷದಲ್ಲಿ ಇರುತ್ತೇನೆ. ಈಗ ನಾನು ಸ್ಪೀಕರ್ ನನಗೆ ನಾನೇ ಕಮಾಂಡರ್ ಎಂದು ವಿಧಾನ ಸಭೆ ಸ್ಪೀಕರ್ ಯು .ಟಿ.ಖಾದರ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇತ್ತೀಚೆಗೆ ನರಿಂಗಾನದಲ್ಲಿ ನಡೆದ ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯು.ಟಿ.ಖಾದರ್‌ ಅವರಿಗೆ ಸ್ಪೀಕರ್ ಆಗೋದು ಇಷ್ಟವಿರಲಿಲ್ಲ ಎಂಬ ಹೇಳಿಕೆಯ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್, ನಾನೀಗ ಸರ್ಕಾರದಲ್ಲಿ ಇಲ್ಲ, ನನಗೆ ಏನು ನಡೆಯುತ್ತಿದೆ ಎಂದು ಗೊತ್ತಾಗಿಲ್ಲ ಎಂದರು.
ವಿಧಾನಸೌಧದಲ್ಲಿ ಶ್ವಾನಗಳ ಕಾಟಕ್ಕೆ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿದರು.
ಸದ್ಯ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಹೆಚ್ಚಾಗಿದ್ದು, ಒಮ್ಮೆಗೆ ವಿಧಾನಸೌಧದಿಂದ ಶಾಸಕರನ್ನಾದರೂ ಹೊರಹಾಕಬಹುದು, ಆದರೆ ಶ್ವಾನಗಳನ್ನು ಹೊರಹಾಕೋದೇ ಹೇಗೆ ಎಂದು ಸಮಸ್ಯೆಯಾಗಿದೆ. ಶ್ವಾನಗಳ ಪರವಿದ್ದವರು ಇದ್ದಾರೆ, ವಿರೋಧ ಇದ್ದವರು ಇದ್ದಾರೆ. ಆದ್ದರಿಂದ‌ ಶ್ವಾನಗಳನ್ನು ಹೊರ ಹಾಕೋದಕ್ಕೆ ಸಭೆ ಕರೆದಿದ್ದೇನೆ. ಈ ಸಭೆಗೆ ಪ್ರಾಣಿ ದಯಾ ಸಂಘದವರನ್ನು ಕರೆಯುತ್ತೇವೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು