1:11 PM Thursday26 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಬಗ್ಗೆ ಹೇಳಿದ್ದೇನು?

03/02/2025, 16:59

ಮಂಗಳೂರು(reporterkarnataka.com): ಈಗ ನಾನಿರುವ ಪೋಸ್ಟ್‌ನಲ್ಲಿ ಸಂತೋಷದಲ್ಲಿ ಇದ್ದೇನೆ. ಯಾವುದೇ ಅಧಿಕಾರ ಇಲ್ಲದೇ ಇದ್ರೂ ಸಂತೋಷದಲ್ಲಿ ಇರುತ್ತೇನೆ. ಈಗ ನಾನು ಸ್ಪೀಕರ್ ನನಗೆ ನಾನೇ ಕಮಾಂಡರ್ ಎಂದು ವಿಧಾನ ಸಭೆ ಸ್ಪೀಕರ್ ಯು .ಟಿ.ಖಾದರ್ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಇತ್ತೀಚೆಗೆ ನರಿಂಗಾನದಲ್ಲಿ ನಡೆದ ಕಂಬಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಯು.ಟಿ.ಖಾದರ್‌ ಅವರಿಗೆ ಸ್ಪೀಕರ್ ಆಗೋದು ಇಷ್ಟವಿರಲಿಲ್ಲ ಎಂಬ ಹೇಳಿಕೆಯ ವಿಚಾರವಾಗಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಖಾದರ್, ನಾನೀಗ ಸರ್ಕಾರದಲ್ಲಿ ಇಲ್ಲ, ನನಗೆ ಏನು ನಡೆಯುತ್ತಿದೆ ಎಂದು ಗೊತ್ತಾಗಿಲ್ಲ ಎಂದರು.
ವಿಧಾನಸೌಧದಲ್ಲಿ ಶ್ವಾನಗಳ ಕಾಟಕ್ಕೆ ಬಗ್ಗೆ ಸ್ಪೀಕರ್ ಯು.ಟಿ.ಖಾದರ್ ಅವರು ಮಾತನಾಡಿದರು.
ಸದ್ಯ ವಿಧಾನಸೌಧದಲ್ಲಿ ಶ್ವಾನಗಳ ಕಾಟ ಹೆಚ್ಚಾಗಿದ್ದು, ಒಮ್ಮೆಗೆ ವಿಧಾನಸೌಧದಿಂದ ಶಾಸಕರನ್ನಾದರೂ ಹೊರಹಾಕಬಹುದು, ಆದರೆ ಶ್ವಾನಗಳನ್ನು ಹೊರಹಾಕೋದೇ ಹೇಗೆ ಎಂದು ಸಮಸ್ಯೆಯಾಗಿದೆ. ಶ್ವಾನಗಳ ಪರವಿದ್ದವರು ಇದ್ದಾರೆ, ವಿರೋಧ ಇದ್ದವರು ಇದ್ದಾರೆ. ಆದ್ದರಿಂದ‌ ಶ್ವಾನಗಳನ್ನು ಹೊರ ಹಾಕೋದಕ್ಕೆ ಸಭೆ ಕರೆದಿದ್ದೇನೆ. ಈ ಸಭೆಗೆ ಪ್ರಾಣಿ ದಯಾ ಸಂಘದವರನ್ನು ಕರೆಯುತ್ತೇವೆ ಎಂದು ಖಾದರ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು