1:02 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮಣ್ಣಗುಡ್ಡೆ ದಕ ಜಿಪಂ ಹಿರಿಯ ಪ್ರಾಥಮಿಕ ಶಾಲೆ: ವಿವೇಕ ಶಾಲಾ ಯೋಜನೆಯಡಿ 3 ನೂತನ ತರಗತಿ ಕೊಠಡಿಗಳ ಉದ್ಘಾಟನೆ

04/02/2025, 00:01

ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲವೂ ಹಂತ ಹಂತವಾಗಿ ಅನುಷ್ಠಾನಕ್ಕೆ ಬರುತ್ತಿದ್ದು ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ, ಡಾ.ಕಿಶೋರ್ ಕುಮಾರ್, ಜೇಮ್ಸ್ ಕುಟಿನ್ಹಾ, ವೇದಾವತಿ ರಾವ್, ಮಹಮ್ಮದ್ ಸಿಕಂದರ್, ಕೃಷ್ಣ ಹೆಗ್ಡೆ, ಸುರೇಶ್ಚಂದ್ರ ಶೆಟ್ಟಿ, ಮುಕೇಶ್, ಆಶ್ರಯ ಭಂಡಾರಿ, ಉಮೇಶ್ ಗಟ್ಟಿ, ಮೇಘ ಗೋಕುಲ್, ಆಶಾ ನಾಗರಾಜ್, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು