11:55 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಮಣ್ಣಗುಡ್ಡೆ ದಕ ಜಿಪಂ ಹಿರಿಯ ಪ್ರಾಥಮಿಕ ಶಾಲೆ: ವಿವೇಕ ಶಾಲಾ ಯೋಜನೆಯಡಿ 3 ನೂತನ ತರಗತಿ ಕೊಠಡಿಗಳ ಉದ್ಘಾಟನೆ

04/02/2025, 00:01

ಮಂಗಳೂರು(reporterkarnataka.com): ನಗರದ ಮಣ್ಣಗುಡ್ಡೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಿವೇಕ ಶಾಲಾ ಯೋಜನೆಯಡಿ ಶಾಸಕರ ಅನುದಾನದಲ್ಲಿ ನಿರ್ಮಾಣಗೊಂಡ ಮೂರು ನೂತನ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಇದು 2022-23 ನೇ ಸಾಲಿನ ರಾಜ್ಯ ವಲಯ ಮುಂದುವರಿದ ಯೋಜನೆಯ ಸರ್ಕಾರಿ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಕೊಠಡಿಗಳ ನಿರ್ಮಾಣ ಕಾಮಗಾರಿಯ ಕ್ರಿಯಾ ಯೋಜನೆಯಾಗಿದ್ದು, ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಇದೀಗ ಅವೆಲ್ಲವೂ ಹಂತ ಹಂತವಾಗಿ ಅನುಷ್ಠಾನಕ್ಕೆ ಬರುತ್ತಿದ್ದು ಸರ್ಕಾರಿ ಶಾಲೆಗಳು ಇನ್ನಷ್ಟು ಅಭಿವೃದ್ಧಿ ಆಗಬೇಕು ಎಂದು ಹೇಳಿದರು.
ಪಾಲಿಕೆ ಸದಸ್ಯೆ ಸಂಧ್ಯಾ ಮೋಹನ್ ಆಚಾರ್ಯ, ಡಾ.ಕಿಶೋರ್ ಕುಮಾರ್, ಜೇಮ್ಸ್ ಕುಟಿನ್ಹಾ, ವೇದಾವತಿ ರಾವ್, ಮಹಮ್ಮದ್ ಸಿಕಂದರ್, ಕೃಷ್ಣ ಹೆಗ್ಡೆ, ಸುರೇಶ್ಚಂದ್ರ ಶೆಟ್ಟಿ, ಮುಕೇಶ್, ಆಶ್ರಯ ಭಂಡಾರಿ, ಉಮೇಶ್ ಗಟ್ಟಿ, ಮೇಘ ಗೋಕುಲ್, ಆಶಾ ನಾಗರಾಜ್, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಹಳೆ ವಿದ್ಯಾರ್ಥಿ ಸಂಘದವರ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು