6:55 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಎಂಆರ್‍ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆ ಕಾಂಕ್ರಿಟೀಕರಣ: ಶಾಸಕ ಡಾ. ಭರತ್ ಶೆಟ್ಟಿ ಉದ್ಘಾಟನೆ

04/02/2025, 00:04

ಸುರತ್ಕಲ್(reporterkarnataka.com): ಸುರತ್ಕಲ್ ಎಂಆರ್‍ಪಿಎಲ್ ರಸ್ತೆಯ ರೈಲ್ವೆ ಮೇಲ್ಸೇತುವೆಯನ್ನು ಮಂಗಳೂರು ಮಹಾನಗರ ಪಾಲಿಕೆ ನಿಧಿ 78 ಲಕ್ಷ ರೂ. ವೆಚ್ಚದಲ್ಲಿ ಕಾಂಕ್ರಿಟ್ ಕಾಮಗಾರಿ ನಡೆಸು ಸುಸಜ್ಜಿತ ರಸ್ತೆಯನ್ನಾಗಿ ಪರಿವರ್ತಿಸಲಾಗಿದ್ದು ಸೋಮವಾರ ಶಾಸಕ ಡಾ.ಭರತ್ ಶೆಟ್ಟಿ ವೈ. ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ರೈಲ್ವೆ ಇಲಾಖೆಯ ಆಧೀನದಲ್ಲಿರುವ ಸೇತುವೆಯಾದರೂ ಜನರ ಹಿತದೃಷ್ಠಿಯಿಂದ ಎನ್‍ಒಸಿ ಪಡೆದು ಕಾಂಕ್ರಿಟ್ ಮಾಡಲಾಗಿದೆ.
ರೈಲ್ವೆ ಮೇಲ್ಸೇತುವೆಯನ್ನು ಚತುಷ್ಪಥ ಮಾಡುವ ಅಗತ್ಯವಿದ್ದು ಜಾಗ ಗುರುತಿಸಿ ಹೆಚ್ಚುವರಿ ಕಾಂಕ್ರಿಟ್ ಮಾಡಲಾಗಿದೆ. ಸಂಸದರಾದ ಬೃಜೇಶ್ ಚೌಟ ಹಾಗೂ ರೈಲ್ವೆ ಸಚಿವ ಸೋಮಣ್ಣ ಅವರಲ್ಲಿ ಪ್ರಸ್ತಾವನೆ ಇರಿಸಲಾಗಿದ್ದು ಭವಿಷ್ಯದಲ್ಲಿ ಅನುದಾನ ದೊರಕುವ ಭರವಸೆಯಿದೆ ಎಂದರು. ಹಂಪ್ಸ್ ಆಳವಡಿಸಿ ವೇಗ ನಿಯಂತ್ರಣಕ್ಕೆ ಒತ್ತು ನೀಡಲಾಗಿದೆ ಎಂದರು.
ರಸ್ತೆಯನ್ನು ಅವಧಿಗಿಂತ ಮುಂಚಿತವಾಗಿ ತ್ವರಿತವಾಗಿ ನಿರ್ಮಿಸಲು ಸಹಕರಿಸಿದ ಪಾಲಿಕೆ ಎಂಜಿನಿಯರ್ ಕಾರ್ತಿಕ್ ಶೆಟ್ಟಿ ,ಗುತ್ತಿಗೆದಾರರಾದ ಸುಧಾಕರ ಪೂಂಜಾ,ಮನಪಾ ಸದಸ್ಯರನ್ನು ಹಾಗೂ ಸುಮಾರು ಒಂದು ತಿಂಗಳ ಕಾಲ ಸಂಚಾರದಲ್ಲಿ ಸಹಕರಿಸಿದ ವಾಹನ ಚಾಲಕರು,ಸ್ಥಳೀಯರನ್ನು ಶಾಸಕರು ಶ್ಲಾಘಿಸಿದರು.
ಶಾಸಕರು ಹೊಸ ರಸ್ತೆಯಲ್ಲಿ ಆಟೋ ರಿಕ್ಷಾ ಸ್ವತಃ ಚಲಾಯಿಸಿ ಹೊಸ ರಸ್ತೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.


ಮೇಯರ್ ಮನೋಜ್ ಕುಮಾರ್ ಮಾತನಾಡಿ ಶಾಸಕರ ನೆರವಿನೊಂದಿಗೆ ಇಲ್ಲಿನ ಸೇತುವೆ ಕಾಂಕ್ರಿಟ್ ಮಾಡಲಾಗಿದ್ದು ಮೂಲಸೌಕರ್ಯಗಳಿಗೆ ಒತ್ತು ನೀಡಲಾಗಿದೆ ಎಂದರು. ಉಪಮೇಯರ್ ಬಾನುಮತಿ, ಸ್ಥಳೀಯ ಮನಪಾ ಸದಸ್ಯರಾದ ಸರಿತಶಶಿಧರ್, ವರುಣ್ ಚೌಟ, ಲೋಕೇಶ್ ಬೊಳ್ಳಾಜೆ,ನಯನ ಆರ್.ಕೋಟ್ಯಾನ್, ಶ್ವೇತ ಎ, ಶೋಭಾ ರಾಜೇಶ್,ವೇದಾವತಿ,ಲಕ್ಷ್ಮೀಶೇಖರ್ ದೇವಾಡಿಗ, ಮನಪಾದ ಮಾಜಿ ಮೇಯರ್ ಗಣೇಶ್ ಹೊಸಬೆಟ್ಟು, ಸಹಕಾರ ಭಾರತಿ ಪ್ರಕೋಷ್ಟದ ಅಶೋಕ್ ಶೆಟ್ಟಿ ತಡಂಬೈಲ್, ಬಿಜೆಪಿ ಮಂಡಲ ಪ್ರಮುಖರು, ಪದಾಧಿಕಾರಿಗಳು, ರಿಕ್ಷಾಚಾಲಕ ಮಾಲಕ ,ಕಾರು ಚಾಲಕ ಮಾಲಕ ಸಂಘದ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು