10:16 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ನಂಜನಗೂಡು: ವಿಚಿತ್ರ ರೂಪದ ಮಗು ಜನನ; ವೈದ್ಯ ಲೋಕಕ್ಕೆ ಸವಾಲಾದ ಪ್ರಕರಣ

05/02/2025, 17:17

*ದಂಪತಿಗೆ ಎರಡನೇ ಬಾರಿಗೂ ಇದೇ ರೀತಿ ಮಗು ಜನನ ಆತಂಕದಲ್ಲಿ ಕುಟುಂಬ...*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಅಪರೂಪದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ.
ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ. ವಿಚಿತ್ರವಾದ ಕಣ್ಣು ಮತ್ತು ತುಟಿ, ಮೈಯೆಲ್ಲಾ ಇದ್ದಲಿನಂತೆ ಕಪ್ಪು ಬಣ್ಣ.ನೋಡುಗರನ್ನ ಬೆಚ್ಚಿಬೀಳುವಂತಹ ವಿಚಿತ್ರ ಮಗು ಹುಟ್ಟುವ ಮೂಲಕ ಆರೋಗ್ಯ ಇಲಾಖೆಯನ್ನ ಹುಬ್ಬೇರುವಂತೆ ಮಾಡಿದೆ.
ಹುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಸೇರಿರುವ ಗ್ರಾಮ ಒಂದರ ದಂಪತಿಗೆ ಇಂತಹ ರೂಪ ಹೊಂದಿರುವ ಮಗು ಹುಟ್ಟಿದೆ.
ಮಗುವಿನ ಆಕಾರ ಮತ್ತು ರೂಪಕ್ಕೆ ಗ್ರಾಮಸ್ಥರು ಮತ್ತು ದಂಪತಿ ಕುಟುಂಬಸ್ಥರು ಶಾಕ್ ಆಗಿದ್ದಾರೆ. ಮಗುವನ್ನು ಉಳಿಸಿಕೊಳ್ಳಲು ಹುರ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.
ವಿಚಿತ್ರ ರೂಪದ ಮಗುವನ್ನ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಏಳು ದಿನಗಳ ಕಾಲ ತುರ್ತು ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷವಷ್ಟೇ ಇದೇ ದಂಪತಿ ಇಂತದ್ದೇ ರೂಪ ಹೊಂದಿದ ಮಗುವಿಗೆ ಜನ್ಮ ನೀಡಿದ್ದರು ಎಂದು ತಿಳಿದು ಬಂದಿದ್ದು ನಾಲ್ಕೈದು ದಿನಗಳ ನಂತರ ಸಾವನ್ನಪ್ಪಿತ್ತು ಎನ್ನಲಾಗಿದೆ. ಮತ್ತೆ ಈ ಬಾರಿಯೂ ಕೂಡ ಇದೇ ರೀತಿ ಇಡೀ ಕುಟುಂಬವನ್ನು ಬೆಚ್ಚಿ ಬೀಳಿಸುವಂತಹ ವಿಚಿತ್ರ ಮಗು ಈ ದಂಪತಿಗೆ ಹುಟ್ಟಿದೆ.
ಈ ಹಿಂದೆ ನಡೆದ ಪ್ರಕರಣದ ನಂತರ ಆರೋಗ್ಯ ಇಲಾಖೆ ನೀಡಿದ್ದ ಸಲಹೆ ಸೂಚನೆಗಳನ್ನ ದಂಪತಿ ಪಾಲಿಸಿಲ್ಲ ಎಂದು ಹೇಳಲಾಗಿದ್ದು ಮಗುವನ್ನ ಉಳಿಸಿಕೊಳ್ಳಲು ಚೆಲುವಂಬಾ ಆಸ್ಪತ್ರೆಯ ತುರ್ತು ಘಟಕದಲ್ಲಿರಿಸಿ ಹರಸಾಹಸ ನಡೆಸಲಾಗುತ್ತಿದೆ.
ಇಂತಹ ವಿಸ್ಮಯವಾದ ಮಗು ಹುಟ್ಟುವ ಮೂಲಕ ವೈದ್ಯಲೋಕಕ್ಕೆ ಸವಾಲು ಎನ್ನುವಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು