7:36 PM Wednesday5 - February 2025
ಬ್ರೇಕಿಂಗ್ ನ್ಯೂಸ್
ದೇಶೀಯವಾಗಿ ಅಭಿವೃದ್ಧಿಪಡಿಸಲಾದ ರೇಡಿಯೋ ಕಾಲರ್ ಲೋಕಾರ್ಪಣೆ; ಆನೆ ಹಾವಳಿ ತಡೆಯುವಲ್ಲಿ ಕೆ.ಪಿ. ಟ್ರ್ಯಾಕರ್… ಕಾಂಗ್ರೆಸ್ ಸರಕಾರದಿಂದ ರಾಜ್ಯ ಸೂತಕದ ಮನೆಯಾಗಿದೆ: ಹಾಸನದಲ್ಲಿ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ರೈತರ ಖಾತೆಗೆ 48 ತಾಸಲ್ಲೇ ಬೆಂಬಲ ಬೆಲೆ ನೇರ ಜಮೆ; ಸಂಸತ್ ನಲ್ಲಿ… ರಾಜ್ಯದಲ್ಲಿ ಕೃತಕ ಬುದ್ಧಿಮತ್ತೆ ಉದ್ಯಮಕ್ಕೆ ಸಹಕಾರ: ಕೇಂದ್ರ ಸಚಿವ ಕುಮಾರಸ್ವಾಮಿ DUO ಬ್ಲಾಕ್ ವಾಟರ್ ಸಾಫ್ಟನರ್: ಯುರಾಕ್ವಾ ಜತೆ ಕ್ರಿಸ್ಟಲ್ ಪ್ರೈವೇಟ್ ಲಿಮಿಟೆಡ್ ಪಾಲುದಾರಿಕೆ ನಾನು ಸ್ಪೀಕರ್, ನನಗೆ ನಾನೇ ಕಮಾಂಡರ್ ಎಂದ ಯು.ಟಿ. ಖಾದರ್ ವಿಧಾನಸೌಧದಲ್ಲಿ ಶ್ವಾನಗಳ… ಆರೋಗ್ಯಕರ ಸಮಾಜ ಕಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ: ಸಮುದಾಯ ಆರೋಗ್ಯಾಧಿಕಾರಿಗಳಿಗೆ ಸಿಎಂ ಕರೆ ನಂಜನಗೂಡು: ಸಾಲ ತೀರಿಸದ ಸ್ನೇಹಿತ; ಮನನೊಂದು ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಭಾರೀ ಗಾಳಿಗೆ ರಸ್ತೆಗೆ ಬಿದ್ದ ಬೃಹತ್ ಮರ; ಚಿಕ್ಕಮಗಳೂರು-ಶೃಂಗೇರಿ ರಸ್ತೆ ಸಂಚಾರ ಅಸ್ತವ್ಯಸ್ತ;… ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ…

ಇತ್ತೀಚಿನ ಸುದ್ದಿ

ವೈಜಾಗ್ ಸ್ಟೀಲ್ (RINl) ಭವಿಷ್ಯದ ಯೋಜನೆ: ಕೇಂದ್ರ ಸಚಿವ ಕುಮಾರಸ್ವಾಮಿ; ಎಚ್ ಡಿಕೆಯ ಭೇಟಿಯಾದ ಆಂಧ್ರ ಸಚಿವ ನಾ.ರಾ.ಲೋಕೇಶ್

05/02/2025, 19:29

*₹11,440 ಕೋಟಿ ಪುನಶ್ಚೇತನ ಪ್ಯಾಕೇಜ್ ಬಗ್ಗೆ ಚರ್ಚೆ*

*ನವದೆಹಲಿಯ ಮಾಜಿ ಪ್ರಧಾನಿಗಳ ಮನೆಯಲ್ಲಿ ಭೇಟಿ; ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಲೋಕೇಶ್*

ನವದೆಹಲಿ(reporterkarnataka.com): ಕೇಂದ್ರ ಸರಕಾರವು ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ ಅಥವಾ ವೈಜಾಗ್ ಸ್ಟೀಲ್ (RINl) ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಐಟಿ ಸಚಿವ ನಾ.ರಾ.ಲೋಕೇಶ್ ಅವರು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದರು.
ನವದೆಹಲಿಯಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸದಲ್ಲಿ ಸಚಿವ ಕುಮಾರಸ್ವಾಮಿ ಅವರನ್ನು ಭೇಟಿಯಾದ ಲೋಕೇಶ್ ಅವರು ವೈಜಾಗ್ ಸ್ಟೀಲ್ ಪುನಶ್ಚೇತನ ಪ್ಯಾಕೇಜ್ ಘೋಷಿಸಿದ ಹಿನ್ನೆಲೆಯಲ್ಲಿ ವಿಶೇಷವಾಗಿ ಕೃತಜ್ಞತೆ ಸಲ್ಲಿಸಿದರು.
ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಉಕ್ಕು ಖಾತೆ ಸಹಾಯಕ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮ, ಸಂಸದ ಭರತ್ ಅವರೊಂದಿಗೆ ಉಕ್ಕು ಸಚಿವರನ್ನು ಭೇಟಿಯಾದ ಲೋಕೇಶ್ ಅವರು ಬಹುಮುಖ್ಯವಾಗಿ ವೈಜಾಗ್ ಸ್ಟೀಲ್ ಪುನಶ್ಚೇತನ ಯೋಜನೆ ಹಾಗೂ ಭವಿಷ್ಯದಲ್ಲಿ ಕಾರ್ಖಾನೆಯನ್ನು ಯಾವ ರೀತಿಯಲ್ಲಿ ಅಭಿವೃದ್ಧಿ ಪಥದಲ್ಲಿ ನಡೆಸಬೇಕು ಎಂಬ ಬಗ್ಗೆ ಸವಿಸ್ತಾರವಾಗಿ ಸಮಾಲೋಚನೆ ನಡೆಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಗುರಿ ನಿಗದಿ ಮಾಡಿದ್ದು, ಅದರಂತೆ ನಾವು ಉಕ್ಕು ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಬೇಕಿದೆ. ಅದರಲ್ಲಿಯೂ ಪರಿಸರ ಪೂರಕವಾದ ಗ್ರೀನ್ ಸ್ಟೀಲ್, ಸ್ಪೆಶಾಲಿಟಿ ಸ್ಟೀಲ್ ತಯಾರಿಕೆಯಲ್ಲಿ ಭಾರತ ಮುಂಚೂಣಿಗೆ ಬರಬೇಕಿದೆ. ಈ ನಿಟ್ಟಿನಲ್ಲಿ ವೈಜಾಗ್ ಸ್ಟೀಲ್ ಗೆ ಶಕ್ತಿ ತುಂಬಲು ಕೇಂದ್ರ ಸರಕಾರ ನಿರ್ಧರಿಸಿತು ಎಂದು ಲೋಕೇಶ್ ಅವರಿಗೆ ಸಚಿವರು ಹೇಳಿದರು.
ಪ್ಯಾಕೇಜ್ ಪರಿಣಾಮಕಾರಿ ಬಳಕೆ ಹಾಗೂ ನಿಗದಿತ ಗುರಿಯಂತೆ ಕಾರ್ಖಾನೆಯ ಮೂರು ಬ್ಲಾಸ್ಟ್ ಫರ್ ನೆಸ್ (ಊದು ಕುಲುಮೆ)ಗಳ ಮೂಲಕ ವಾರ್ಷಿಕ 7.3 ದಶಲಕ್ಷ ಟನ್ ಉಕ್ಕು ತಯಾರು ಮಾಡುವುದು ಕೇಂದ್ರದ ಗುರಿಯಾಗಿದೆ. ಈ ಗುರಿ ಸಾಧನೆಗೆ ಆಂಧ್ರ ಪ್ರದೇಶದ ಸರಕಾರ ಹಾಗೂ ಕಾರ್ಮಿಕರ ಸಹಕಾರ ಅತ್ಯಗತ್ಯವಾಗಿ ಬೇಕಿದೆ ಎಂದು ಸಚಿವರು ಲೋಕೇಶ್ ಅವರಲ್ಲಿ ಒತ್ತಿ ಹೇಳಿದರು.
ಈ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರಕಾರದ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ಲೋಕೇಶ್ ಅವರು ಕೇಂದ್ರ ಸಚಿವರಿಗೆ ಭರವಸೆ ನೀಡಿದರು.


ಕಾರ್ಖಾನೆಯ ಪುನಶ್ಚೇತನ ವಿಷಯದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತೋರಿದ ಬದ್ಧತೆಯ ಶ್ಲಾಘಿಸಿದ ಕೇಂದ್ರ ಸಚಿವರು, ತಮ್ಮ ಸಚಿವಾಲಯಗಳ ವತಿಯಿಂದ ಆಂಧ್ರ ಪ್ರದೇಶದ ಅಭಿವೃದ್ಧಿಗೆ ಅಗತ್ಯ ಇರುವ ಎಲ್ಲ ಸಹಕಾರ ನೀಡುವುದಾಗಿ ಲೋಕೇಶ್ ಅವರಿಗೆ ಹೇಳಿದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವರು ಹಾಗೂ ಲೋಕೇಶ್ ಅವರು ಸಮಾಲೋಚನೆ ನಡೆಸಿದರು. ತದ ನಂತರ ಮಾಜಿ ಪ್ರಧಾನಿ ದೇವೇಗೌಡರ ಜತೆಯಲ್ಲಿ ಎಲ್ಲರೂ ಮಧ್ಯಾಹ್ನದ ಭೋಜನ ಸ್ವೀಕರಿಸಿದರು. ಲೋಕೇಶ್, ರಾಮ್ ಮೋಹನ್ ನಾಯ್ಡು ಸೇರಿದಂತೆ ಎಲ್ಲ ಸಂಸದರನ್ನು ಮಾಜಿ ಪ್ರಧಾನಿಗಳು ಹಾಗೂ ಸಚಿವರು ಆತ್ಮೀಯವಾಗಿ ಸತ್ಕರಿಸಿದರು.
ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಡಾ. ಸಿ.ಎನ್.ಮಂಜುನಾಥ್, ಕೋಲಾರ ಸಂಸದ ಮಲ್ಲೇಶ್ ಬಾಬು ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು