4:33 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು