9:25 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ನಂಜನಗೂಡು: ಶಕ್ತಿ ದೇವತೆ ಶ್ರೀ ಚಿಕ್ಕಮ್ಮದೇವಿ ಅಮ್ಮನವರ ಜಾತ್ರಾ ಮಹೋತ್ಸವ

05/02/2025, 21:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಹರತಲೆ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವ ವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು
ಜಾತ್ರಾ ಮಹೋತ್ಸವದ ಅಂಗವಾಗಿ ಗಂಗಾ ಪೂಜೆ, ಕಳಸ ಪೂಜೆಯೊಂದಿಗೆ ದೇವಾಲಯದಿಂದ ಹೊರ ತಂದ ಅಲಂಕೃತ ಶ್ರೀ ಚಿಕ್ಕಮ್ಮ ದೇವಿ ಅಮ್ಮನವರ ಉತ್ಸವಮೂರ್ತಿಗೆ ಪೂಜೆ ಸಲ್ಲಿಸಿ ಹೆಣ್ಣು ಮಕ್ಕಳಿಂದ ತಂದ ಹಾಲರವಿ ಉತ್ಸವಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಾಧ್ಯಕ್ಷರಾದ ಚಿಕ್ಕರಂಗನಾಯಕ ಚಾಲನೆ ನೀಡಿದರು.


ತಮಟೆ, ಕಂಸಾಳೆ ಹಾಗೂ ಮಂಗಳವಾದ್ಯ ಸೇರಿದಂತೆ ಛತ್ರಿ ಚಾಮರ, ಸತ್ತಿಗೆ, ಸುರಪಾನಿಗಳೊಂದಿಗೆ ಶ್ರೀ ಅಮ್ಮನವರ ಹಾಲರವಿ ಹಾಗೂ ಉತ್ಸವವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಸಲಾಯಿತು.
ಸುತ್ತಮುತ್ತಲಿನ ಸಾವಿರಾರು ಭಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿಗೆ ಪೂಜೆ ಸಲ್ಲಿಸಿ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಉತ್ಸವದಲ್ಲಿ ಪಾಲ್ಗೊಂಡ ದೇವರ ಗುಡ್ಡಪ್ಪ ಅವರಿಗೆ ಗ್ರಾಮದ ಪ್ರತಿಯೊಬ್ಬ ಮನೆಯವರು ನೀರು ಊಯ್ದು ಅರಿಶಿನ ಕುಂಕುಮ ಹಚ್ಚಿ ವಿಶಿಷ್ಟವಾಗಿ ಪೂಜೆ ಸಲ್ಲಿಸಲಾಗುತ್ತಿತ್ತು.ಬಂದ ಎಲ್ಲಾ ಭಕ್ತರಿಗೆ ಗ್ರಾಮಸ್ಥರಿಂದ ಅನ್ನಸಂತರ್ಪಣೆಯನ್ನು ಸಹ ಏರ್ಪಡಿಸಲಾಗಿತ್ತು.
ಬಳಿಕ ಗ್ರಾಮದ ಹಾಗೂ ಬಿಜೆಪಿ ಮುಖಂಡ ಚಿಕ್ಕರಂಗನಾಯಕ ಮಾತನಾಡಿ ಪ್ರತಿವರ್ಷದಂತೆ ಈ ಬಾರಿಯೂ ಗ್ರಾಮದಲ್ಲಿ ಶಕ್ತಿ ದೇವತೆ ಶ್ರೀ ಚಿಕ್ಕಮ್ಮ ದೇವಿ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ ತಾಯಿಯು ಎಲ್ಲರಿಗೂ ಒಳ್ಳೆಯದನ್ನು ಮಾಡಲಿ ಎಂದು ಶುಭ ಹಾರೈಸಿ ಜಾತ್ರಾ ಮಹೋತ್ಸವದ ಬಗ್ಗೆ ವಿವರಿಸಿದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ಕಾಂತರಾಜು, ಸದಸ್ಯರಾದ ಗೋವಿಂದರಾಜು, ಮಾಜಿ ಸದಸ್ಯ ಚಿಕ್ಕಣ್ಣ, ಯಜಮಾನ್ ಚಿನ್ನಸ್ವಾಮಿ, ಮರಿಗಂಡ ನಾಯಕ ಸೇರಿದಂತೆ ನಾಯಕ ಜನಾಂಗದ ಕುಲಬಾಂಧವರು, ಯಜಮಾನರುಗಳು, ಮುಖಂಡರು ಸೇರಿದಂತೆ ಚಿಕ್ಕ ರಂಗನಾಯಕ್ ಅಭಿಮಾನಿ ಬಳಗದ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು