10:36 PM Friday26 - December 2025
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;…

ಇತ್ತೀಚಿನ ಸುದ್ದಿ

ಸುರತ್ಕಲ್: ಹಲವು ತಿಂಗಳಿನಿಂದ ನೀರಿನ ಸಮಸ್ಯೆ; ಸ್ಪಂದಿಸದ ಪಾಲಿಕೆ; ಸಾರ್ವಜನಿಕರ ಪ್ರತಿಭಟನೆ

06/02/2025, 09:24

ಸುರತ್ಕಲ್(reporterkarnataka.com): ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.
5ನೇ ವಾರ್ಡ್ ಮಹಾನಗರ ಪಾಲಿಕೆ ಸದಸ್ಯರಾದ ಶಂಶಾದ್ ಅಬೂಬಕ್ಕರ್ ಮಾತಾಡಿ, “ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪ್ರದೇಶವು ನೀರಿನ ಸಮಸ್ಯೆಯಿಂದ ತೀವ್ರ ತೊಂದರೆಗೊಳಗಾಗಿದೆ. ಅಧಿಕಾರಿಗಳಿಂದ ಭರವಸೆಯ ಮೇಲೆ ಬರವಸೆಗಳು ಮಾತ್ರ ದೊರೆಯುತ್ತಿದೆಯೇ ಹೊರತು ಯಾವುದೇ ರೀತಿಯ ಅಭಿವೃದ್ಧಿಯ ಪ್ರತಿಕ್ರಿಯೆ ದೊರಕುತ್ತಿಲ್ಲ“ ಎಂದರು.
ಉಪ ಅಯುಕ್ತೆ ವಾಣಿ ಆಳ್ವ ಹಾಗೂ ಅಭಿಯಂತರರು ಸ್ಥಳಕ್ಕೆ ಅಗಮಿಸಿದ್ದು ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿದ್ದಂತೆ ಒಂದು ವಾರದ ಒಳಗಾಗಿ ಸಂಭಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮ. ನ. ಪಾ. ಕಚೇರಿಯ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆಯನ್ನು ಕೊಟ್ಟು ಪ್ರತಿಭಟನೆಯನ್ನು ಕೊನೆಗೊಳಿಸಲಾಯಿತು.
ನೌಶಾದ್ ಚೊಕ್ಕಬೆಟ್ಟು,ಚೊಕ್ಕಬೆಟ್ಟು ನವಾಝ್ ಐನೈನ್, ಫಯಾಝ್ ಕೃಷ್ಣಾಪುರ, ನವಾಝ್ ಪಜ್ಜು, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು