11:01 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಸುರತ್ಕಲ್: ಹಲವು ತಿಂಗಳಿನಿಂದ ನೀರಿನ ಸಮಸ್ಯೆ; ಸ್ಪಂದಿಸದ ಪಾಲಿಕೆ; ಸಾರ್ವಜನಿಕರ ಪ್ರತಿಭಟನೆ

06/02/2025, 09:24

ಸುರತ್ಕಲ್(reporterkarnataka.com): ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.
5ನೇ ವಾರ್ಡ್ ಮಹಾನಗರ ಪಾಲಿಕೆ ಸದಸ್ಯರಾದ ಶಂಶಾದ್ ಅಬೂಬಕ್ಕರ್ ಮಾತಾಡಿ, “ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪ್ರದೇಶವು ನೀರಿನ ಸಮಸ್ಯೆಯಿಂದ ತೀವ್ರ ತೊಂದರೆಗೊಳಗಾಗಿದೆ. ಅಧಿಕಾರಿಗಳಿಂದ ಭರವಸೆಯ ಮೇಲೆ ಬರವಸೆಗಳು ಮಾತ್ರ ದೊರೆಯುತ್ತಿದೆಯೇ ಹೊರತು ಯಾವುದೇ ರೀತಿಯ ಅಭಿವೃದ್ಧಿಯ ಪ್ರತಿಕ್ರಿಯೆ ದೊರಕುತ್ತಿಲ್ಲ“ ಎಂದರು.
ಉಪ ಅಯುಕ್ತೆ ವಾಣಿ ಆಳ್ವ ಹಾಗೂ ಅಭಿಯಂತರರು ಸ್ಥಳಕ್ಕೆ ಅಗಮಿಸಿದ್ದು ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿದ್ದಂತೆ ಒಂದು ವಾರದ ಒಳಗಾಗಿ ಸಂಭಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮ. ನ. ಪಾ. ಕಚೇರಿಯ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆಯನ್ನು ಕೊಟ್ಟು ಪ್ರತಿಭಟನೆಯನ್ನು ಕೊನೆಗೊಳಿಸಲಾಯಿತು.
ನೌಶಾದ್ ಚೊಕ್ಕಬೆಟ್ಟು,ಚೊಕ್ಕಬೆಟ್ಟು ನವಾಝ್ ಐನೈನ್, ಫಯಾಝ್ ಕೃಷ್ಣಾಪುರ, ನವಾಝ್ ಪಜ್ಜು, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು