9:39 PM Sunday17 - May 2026
ಬ್ರೇಕಿಂಗ್ ನ್ಯೂಸ್
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ…

ಇತ್ತೀಚಿನ ಸುದ್ದಿ

ಸುರತ್ಕಲ್: ಹಲವು ತಿಂಗಳಿನಿಂದ ನೀರಿನ ಸಮಸ್ಯೆ; ಸ್ಪಂದಿಸದ ಪಾಲಿಕೆ; ಸಾರ್ವಜನಿಕರ ಪ್ರತಿಭಟನೆ

06/02/2025, 09:24

ಸುರತ್ಕಲ್(reporterkarnataka.com): ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.
5ನೇ ವಾರ್ಡ್ ಮಹಾನಗರ ಪಾಲಿಕೆ ಸದಸ್ಯರಾದ ಶಂಶಾದ್ ಅಬೂಬಕ್ಕರ್ ಮಾತಾಡಿ, “ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪ್ರದೇಶವು ನೀರಿನ ಸಮಸ್ಯೆಯಿಂದ ತೀವ್ರ ತೊಂದರೆಗೊಳಗಾಗಿದೆ. ಅಧಿಕಾರಿಗಳಿಂದ ಭರವಸೆಯ ಮೇಲೆ ಬರವಸೆಗಳು ಮಾತ್ರ ದೊರೆಯುತ್ತಿದೆಯೇ ಹೊರತು ಯಾವುದೇ ರೀತಿಯ ಅಭಿವೃದ್ಧಿಯ ಪ್ರತಿಕ್ರಿಯೆ ದೊರಕುತ್ತಿಲ್ಲ“ ಎಂದರು.
ಉಪ ಅಯುಕ್ತೆ ವಾಣಿ ಆಳ್ವ ಹಾಗೂ ಅಭಿಯಂತರರು ಸ್ಥಳಕ್ಕೆ ಅಗಮಿಸಿದ್ದು ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿದ್ದಂತೆ ಒಂದು ವಾರದ ಒಳಗಾಗಿ ಸಂಭಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮ. ನ. ಪಾ. ಕಚೇರಿಯ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆಯನ್ನು ಕೊಟ್ಟು ಪ್ರತಿಭಟನೆಯನ್ನು ಕೊನೆಗೊಳಿಸಲಾಯಿತು.
ನೌಶಾದ್ ಚೊಕ್ಕಬೆಟ್ಟು,ಚೊಕ್ಕಬೆಟ್ಟು ನವಾಝ್ ಐನೈನ್, ಫಯಾಝ್ ಕೃಷ್ಣಾಪುರ, ನವಾಝ್ ಪಜ್ಜು, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು