12:46 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸುರತ್ಕಲ್: ಹಲವು ತಿಂಗಳಿನಿಂದ ನೀರಿನ ಸಮಸ್ಯೆ; ಸ್ಪಂದಿಸದ ಪಾಲಿಕೆ; ಸಾರ್ವಜನಿಕರ ಪ್ರತಿಭಟನೆ

06/02/2025, 09:24

ಸುರತ್ಕಲ್(reporterkarnataka.com): ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು.


ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ ಹಲವು ಬಾರಿ ಮನವಿಯನ್ನು ಸಲ್ಲಿಸಿಯು ಯಾವುದೇ ರೀತಿಯ ಸ್ಪಂದನೆ ಸಿಗದ ಕಾರಣ ಪಾಲಿಕೆ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾತಾಡಿದ ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಹುಸೇನ್ ಅವರು, “ನೀರಿನ ಸಮಸ್ಯೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಸ್ನಾನ ಮಾಡದೇ ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕ್ಷೇತ್ರದ ಶಾಸಕರು ಇತ್ತಕಡೆ ತಿರುಗಿಯೂ ನೋಡುತ್ತಿಲ್ಲ. ಹೀಗಾದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದರು.
5ನೇ ವಾರ್ಡ್ ಮಹಾನಗರ ಪಾಲಿಕೆ ಸದಸ್ಯರಾದ ಶಂಶಾದ್ ಅಬೂಬಕ್ಕರ್ ಮಾತಾಡಿ, “ಸುರತ್ಕಲ್, ಚೊಕ್ಕಬೆಟ್ಟು, ಕೃಷ್ಣಾಪುರ, ಕಾಟಿಪಳ್ಳ ಪ್ರದೇಶವು ನೀರಿನ ಸಮಸ್ಯೆಯಿಂದ ತೀವ್ರ ತೊಂದರೆಗೊಳಗಾಗಿದೆ. ಅಧಿಕಾರಿಗಳಿಂದ ಭರವಸೆಯ ಮೇಲೆ ಬರವಸೆಗಳು ಮಾತ್ರ ದೊರೆಯುತ್ತಿದೆಯೇ ಹೊರತು ಯಾವುದೇ ರೀತಿಯ ಅಭಿವೃದ್ಧಿಯ ಪ್ರತಿಕ್ರಿಯೆ ದೊರಕುತ್ತಿಲ್ಲ“ ಎಂದರು.
ಉಪ ಅಯುಕ್ತೆ ವಾಣಿ ಆಳ್ವ ಹಾಗೂ ಅಭಿಯಂತರರು ಸ್ಥಳಕ್ಕೆ ಅಗಮಿಸಿದ್ದು ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿದ್ದಂತೆ ಒಂದು ವಾರದ ಒಳಗಾಗಿ ಸಂಭಂದ ಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಮ. ನ. ಪಾ. ಕಚೇರಿಯ ಮುಂದೆ ಧರಣಿ ಕೂರುವುದಾಗಿ ಎಚ್ಚರಿಕೆಯನ್ನು ಕೊಟ್ಟು ಪ್ರತಿಭಟನೆಯನ್ನು ಕೊನೆಗೊಳಿಸಲಾಯಿತು.
ನೌಶಾದ್ ಚೊಕ್ಕಬೆಟ್ಟು,ಚೊಕ್ಕಬೆಟ್ಟು ನವಾಝ್ ಐನೈನ್, ಫಯಾಝ್ ಕೃಷ್ಣಾಪುರ, ನವಾಝ್ ಪಜ್ಜು, ಅಬ್ದುಲ್ ಜಬ್ಬಾರ್ ಕೃಷ್ಣಾಪುರ, ಅಬ್ದುಲ್ ಸಲಾಂ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು