2:36 AM Sunday17 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ರಾಜ್ಯ ಸಂಚಾಲಕರಾಗಿ ಜಯಾನಂದ ಪೆರಾಜೆ

06/02/2025, 14:48

ಬಂಟ್ವಾಳ(reporterkarnataka.com): ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ ಸಾಹಿತಿ ಜಯಾನಂದ ಪೆರಾಜೆ ಆಯ್ಕೆಯಾಗಿದ್ದು, ಪದಗ್ರಹಣ ನೆರವೇರಿತು.
ಕಾಸರಗೋಡು ಕನ್ನಡ ಭವನ ಸಭಾಂಗಣದಲ್ಲಿ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ಸ್ಥಾಪಕ ಸಂಚಾಲಕ ಡಾ.ವಾಮನ ರಾವ್ ಬೇಕಲ್ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ಭಾನುವಾರ ನೆರವೇರಿತು. ರಾಜ್ಯ ಮಹಿಳಾ ಸಂಚಾಲಕಿಯಾಗಿ ಡಾ. ಶಾಂತ ಪುತ್ತೂರು, ಕಾಸರಗೋಡು ಜಿಲ್ಲಾ ಅಧ್ಯಕ್ಷರಾಗಿ ಕವಿ ವಿರಾಜ್ ಅಡೂರು , ಗೌರವ ಅಧ್ಯಕ್ಷರಾಗಿ ಶಿಕ್ಷಣ ತಜ್ಞ ವಿ.ಬಿ ಕುಳಮರ್ವ, ಕೋಶಾಧಿಕಾರಿಯಾಗಿ ಸಂಧ್ಯಾರಾಣಿ ಬೇಕಲ್ ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳನ್ನು ಘೋಷಿಸಲಾಯಿತು.
ಕೇಂದ್ರದ ಪ್ರಧಾನ ಸಮಿತಿ ಕ಼ಚೇರಿ ಮುಳ್ಳಿಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಬಯಲು ರಂಗ ಮಂದಿರದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಮೈಸೂರು ಅವರು ಕನ್ನಡ ಧ್ವಜವನ್ನು ಹಸ್ತಾಂತರಿಸಿ ಮಾತನಾಡಿ ಕನ್ನಡ ಭಾಷೆ ಸಂಸ್ಕೃತಿ ಉಳಿಸಲು ವಿವಿಧ ಕನ್ನಡ ಸಂಘಟನೆಗಳು ಕೈಜೋಡಿಸಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ.ಸಾ.ಪ. ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ನಿವೃತ್ತ ಪ್ರಾಂಶುಪಾಲ ಪ್ರೊ. ಪಿ.ಎನ್. ಮೂಡಿತ್ತಾಯ , ನಿವೃತ್ತ ಶಿಕ್ಷಕ ಬಾಲ ಮಧುರಕಾನನ, ಕಾಸರಗೋಡು ಜಿಲ್ಲಾ ಗಮಕ ಕಲಾ ಪರಿಷತ್ತಿನ ಕೇರಳ ಗಡಿನಾಡ ಘಟಕದ ಅಧ್ಯಕ್ಷ ತೆಕ್ಕೆಕೆರೆ ಶಂಕರನಾರಾಯಣ ಭಟ್, ಸಾಮಾಜಿಕ ಮುಖಂಡರಾದ ಡಾ. ವೆಂಕಟ್ರಮಣ ಹೊಳ್ಳ, ಕಾಸರಗೋಡು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ನಾಯ್ಕಾಪು , ಕವಯಿತ್ರಿ ರೇಖಾ ಸುದೇಶ್ ರಾವ್, ಕನ್ನಡ ಭವನದ ನಿರ್ದೇಶಕ ಪ್ರೊ. ಎ. ಶ್ರೀನಾಥ್ , ಕನ್ನಡ ಭವನದ ಕಾರ್ಯದರ್ಶಿ ವಸಂತ ಕೆರೆಮನೆ ಮೊದಲಾದವರು ಶುಭ ಹಾರೈಸಿದರು.
ಡಾ.ವಾಮನ ರಾವ್ ಬೇಕಲ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಪರಿಷತ್ತಿನ ಕಾರ್ಯಚಟುವಟಿಕೆಗಳ ಬಗ್ಗೆ ತಿಳಿಸಿದರು. ಚುಟುಕು ಸಾಹಿತಿ ವಿರಾಜ್ ಅಡೂರು ಅಧ್ಯಕ್ಷತೆಯಲ್ಲಿ ಅಂತಾರಾಜ್ಯ ಮಟ್ಟದ ಚುಟುಕು ಕವಿ ಗೋಷ್ಠಿ ನಡೆಯಿತು. ಕ.ಸಾ.ಪ. ಕೇರಳ ಗಡಿನಾಡ ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಾಕ್ಷ ಪುತ್ರಕಳ ನಿರೂಪಿಸಿದರು. ನರಸಿಂಹ ಭಟ್ ಏತಡ್ಕ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು