7:41 PM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಕಾಡುಕೋಣ ದಾಳಿಗೆ 73ರ ಹರೆಯದ ವೃದ್ದ ದಾರುಣ ಸಾವು: ತೋಟದಲ್ಲಿ ನಡೆದ ದುರ್ಘಟನೆ

06/02/2025, 20:15

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿಗೆ ವೃದ್ಧರೊಬ್ಬರು ಸಾವನ್ನಪ್ಪಿದ ಘಟನೆ ಕಳಸ ತಾಲೂಕಿನ ಹಳುವಳ್ಳಿ ಸಮೀಪದ ಲಲಿತಾದ್ರಿ ಗ್ರಾಮದಲ್ಲಿ ನಡೆದಿದೆ.
ರಘುಪತಿ (73) ಕಾಡುಕೋಣದ ದಾಳಿಗೆ ಸಾವನ್ನಪ್ಪಿದ್ದ ಕೃಷಿಕ. ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಕಾಡುಕೋಣ ದಾಳಿ ಮಾಡಿತ್ತು. ತೋಟಕ್ಕೆ ಹೋಗಿದ್ದ ರಘುಪತಿಯವರು
ಫೋನ್ ರಿಸೀವ್ ಮಾಡದಿದ್ದಾಗ ಮನೆಯವರು
ತೋಟಕ್ಕೆ ಹುಡುಕಿಕೊಂಡು ಬಂದಾಗ ಘಟನೆ ಬೆಳಕಿಗೆ ಬಂದಿದೆ.
ಮಧ್ಯಾಹ್ನ ಮನೆಯಿಂದ ಕಾಫಿ ತೋಟಕ್ಕೆ ರಘುಪತಿ ಅವರು ತೆರಳಿದ್ದರು. ತೋಟದ ಸುತ್ತ 6 ಅಡಿ ಬೇಲಿ ಮಾಡಿದ್ರು ಅದನ್ನ ದಾಟಿ ಕಾಡುಕೋಣ ಬಂದಿದೆ.

ಕಾಡುಕೋಣ ದಾಳಿಯಿಂದ ಕೃಷಿಕನ ಸಾವಿಗೆ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿರಂತರ ಕಾಡುಕೋಣ ಹಾವಳಿಂದ ಬೆಳೆಗಾರರು, ಸ್ಥಳಿಯರು ಕಂಗಾಲಾಗಿದ್ದಾರೆ.
ರಸ್ತೆಗಳಲ್ಲಿಯೂ ಕಾಡು ಕೋಣಗಳು ಅಡ್ಡಲಾಗಿ ನಿಲ್ಲುತ್ತವೆ.ಹಲವು ಬಾರಿ ಮನವಿ ಮಾಡಿದ್ರು ಅರಣ್ಯ ಇಲಾಖೆ ಕ್ರಮಕೈಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು