1:21 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ವಿವರಣೆ

07/02/2025, 07:31

ನವದೆಹಲಿ(reporterkarnataka.com): ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.
ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.


ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.
ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಯ ಪುನಶ್ಚೇತನಕ್ಕೆ ₹11,400 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ ₹20,000 ಕೋಟಿಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು