1:30 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಕೈಗೊಂಡಿರುವ ಉಪಕ್ರಮಗಳ ಬಗ್ಗೆ ವಿವರಣೆ

07/02/2025, 07:31

ನವದೆಹಲಿ(reporterkarnataka.com): ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ರಾಷ್ಟ್ರಪತಿ ಭವನಕ್ಕೆ ತೆರಳಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಗೌರವಪೂರ್ವಕವಾಗಿ ಭೇಟಿಯಾದರು.
ತಮ್ಮ ಎರಡೂ ಇಲಾಖೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿಪರ ಕಾರ್ಯಕ್ರಮಗಳ ಬಗ್ಗೆ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ನೀಡಿದರು.


ಪ್ರಧಾನಿಗಳ ಆತ್ಮನಿರ್ಭರ್ ಭಾರತ್, ಮೆಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ವಿಕಸಿತ ಭಾರತ ಗುರಿಯನ್ನು ಮುಟ್ಟಲು ಕೈಗೊಳ್ಳಲಾಗಿರುವ ಸರ್ವ ಕ್ರಮಗಳ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ಮಾಹಿತಿ ನೀಡಿದರು.
ರಾಷ್ಟ್ರದಲ್ಲಿ 2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉತ್ಪಾದನೆ ಮಾಡುವ ಗುರಿ ಹೊಂದಲಾಗಿದ್ದು, ಆ ಹಿನ್ನಲೆಯಲ್ಲಿ ವಿಶಾಖಪಟ್ಟಣದ ರಾಷ್ಟ್ರೀಯ ಉಕ್ಕು ಕಾರ್ಖಾನೆ (RINL) ಯ ಪುನಶ್ಚೇತನಕ್ಕೆ ₹11,400 ಕೋಟಿಗಳ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಅಲ್ಲದೆ, ಬೋಕಾರೋ ಉಕ್ಕು ಸ್ಥಾವರದಲ್ಲಿ ಕೈಗೊಳ್ಳಲಾಗುತ್ತಿರುವ ₹20,000 ಕೋಟಿಗಳ ವಿಸ್ತರಣಾ ಯೋಜನೆಯ ಬಗ್ಗೆ ಕೂಡಾ ಸಚಿವರು ವಿವರಣೆ ನೀಡಿದರು.
ಬೃಹತ್ ಕೈಗಾರಿಕೆ ವಲಯದಲ್ಲಿ ತರಲಾಗಿರುವ ಸುಧಾರಣಾ ಕ್ರಮಗಳು ಹಾಗೂ ಪಿಎಂ ಇ ಡ್ರೈವ್ ಬಗ್ಗೆಯೂ ಸಚಿವರು ರಾಷ್ಟ್ರಪತಿಗಳಿಗೆ ವಿವರಣೆ ಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು