7:50 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಕಶೆಕೋಡಿ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನಕ್ಕೆ ನೂತನ ಬ್ರಹ್ಮರಥ ಸಮರ್ಪಣೆ; ರಥೋತ್ಸವ

07/02/2025, 09:50

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ದೇಶದ ಅಭಿವೃದ್ಧಿಯ ದೃಷ್ಟಿಯಲ್ಲಿ ಸಮಾಜವು ಸಂಘಟಿತವಾಗಬೇಕು. ಸಂಘಟನೆಗಾಗಿ ಗುರುಮಠ, ಸುಸಜ್ಜಿತ ಸಭಾ ಮಂಟಪ ಹಾಗೂ ಇತರ ವ್ಯವಸ್ಥೆಗಳಿಗೆ ಹಾಗೂ ದೇವಸ್ಥಾನದ ಅಭಿವೃದ್ಧಿ ಕಾರ್ಯದಲ್ಲಿ ಆಡಳಿತ ಮಂಡಳಿಯೊದಿಗೆ ಸಮಾಜ ಬಾಂಧವರು ಸಹಕಾರ ನೀಡಬೇಕು ಎಂದು ಆಡಳಿತ ಮೊಕ್ತೇಸರ ಕಲ್ಲೇಗ ಸಂಜೀವ ನಾಯಕ್ ಹೇಳಿದರು.
ಅವರು ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಜಾತ್ರಾ ಮಹೋತ್ಸವ, ನೂತನ ಬ್ರಹ್ಮರಥ ಸಮರ್ಪಣೆ ಹಾಗೂ ಬ್ರಹ್ಮರಥೋತ್ಸವ ಸಂದರ್ಭದಲ್ಲಿ ಏರ್ಪಡಿಸಲಾದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವೇದಿಕೆಯಲ್ಲಿ ಸಮಾಜದ ಪ್ರಮುಖರಾದ ಮನೀಶ್ ಜಿ. ದಾಬೋಲ್‌ಕರ್ ಅಧ್ಯಕ್ಷರು ಗೌಡ್ ಬ್ರಾಹ್ಮಣ ಸಭಾ ಗೋರೆಗಾವ್, ವಿಕಾಸ್ ವಾಲ್‌ವಾಲ್‌ಕರ್ ಸಮರ್ಥ್ ಡೆವಲಪ್ಪರ್ಸ್ ಮುಂಬೈ, ಡಾ. ಜಯಪ್ರಕಾಶ್ ಎಂ., ಸಂದೀಪ್ ಪ್ರಭು, ಜಯಂತ್ ನಾಯಕ್ ಬೆಂಗಳೂರು, ಸಂಜಯ್ ಪ್ರಭು ಮಂಗಳೂರು, ಮುಕುಂದ ಪ್ರಭು, ಆನುವಂಶಿಕ ಮೊಕ್ತೇಸರ ಕಂಟಿಕ ಗೋಪಾಲ ಶೆಣೈ , ಕಾರ್ಯದರ್ಶಿ ಶಾಂತಾರಾಮ ಶೆಣೈ ಹಾಗೂ ಆಡಳಿತ ಮಂಡಳಿ , ಜೀರ್ಣೋದ್ಧಾರ ಸಮಿತಿ , ಉತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗೌಡ್ ಬ್ರಾಹ್ಮಣ ಸಭಾ ಗೋರೆಗಾಂ ಇದರ ಅಧ್ಯಕ್ಷ ಮನೀಶ್ ಜಿ. ದಾಬೋಲ್‌ಕರ್ ಮಾತನಾಡಿ ಕುಡಾಲ ಗೌಡ್ ಬ್ರಾಹ್ಮಣ ಸಮಾಜದ ಮತ್ತು ಕುಟುಂಬ ವ್ಯವಸ್ಥೆಯ ಮತ್ತು ಕೈಗೊಳ್ಳಬೇಕಾದ ಕಾರ್ಯಯೋಜನೆಗಳ ಬಗ್ಗೆ ಮಾತನಾಡಿದರು. ಗುರು ಶಿಷ್ಯ ಪರಂಪರೆಯೊಂದಿಗೆ ಸ್ವಾಭಿಮಾನದಿಂದ ಸಮಾಜವು ಶಕ್ತಿ ಶಾಲಿಯಾಗಬೇಕೆಂದರು.


ಡಾ.ಜಯಪ್ರಕಾಶ್ ಎಮ್. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಡಾಲ್ ದೇಶಸ್ಥ ಸಮಾಜವನ್ನು ಸಂಘಟಿಸುವ ಬಗ್ಗೆ ಆಶಯ ಭಾಷಣ ಮಾಡಿದರು.ಉಪನ್ಯಾಸಕಿ ಡಾ. ವಿಜಯಲಕ್ಷ್ಮೀ ನಿರೂಪಿಸಿದರು. ಶಿವಾನಂದ ಪ್ರಭು ವಂದಿಸಿದರು.
ಪೂರ್ವಾಹ್ನ ಗಣಪತಿ ಹೋಮ , ಪ್ರಾತಃ ಪೂಜೆ, ಪ್ರಾತಃ ಬಲಿ, ರಥ ಕಲಶ ಪೂಜೆ, ನವಕ ಪ್ರಧಾನ ನಡೆಯಿತು. ಆ ಬಳಿಕ ದೇವರ ಬಲಿ ಉತ್ಸವ , ದರ್ಶನ ಬಲಿ, ಬಟ್ಟಲು ಕಾಣಿಕೆ, ರಥ ಕಲಶಾಭಿಶೇಕ ನೆರವೇರಿತು. ರಾತ್ರಿ ದಾಬೋಳಿ ಮಠ ಸಂಸ್ಥಾನದ ಶ್ರೀ ದತ್ತಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನೂತನ ಬ್ರಹ್ಮ ರಥ ಸಮರ್ಪಣೆ , ರಥಾರೋಹಣ ನಡೆಯಿತು. ವಿಕಾಸ್ ವಾಲ್‌ವಾಲ್‌ಕರ್ , ಅನಿತಾ ಮತ್ತು ಎಂ.ಪಿ.ಪ್ರಭು ನಾಸಿಕ್, ವಿಜಯ ಮತ್ತು ಶ್ರೀ ಮುಕುಂದ ಪ್ರಭು ಇವರಿಗೆ ಗೌರವ ಸಮರ್ಪಣೆ ಇತ್ತು.
ನೂತನ ನಿರ್ಮಾನ ಶಿಲ್ಪಿ ಹರೀಶ್ ಆಚಾರ್ಯ ಬೋಳಿಯಾರು ಸನ್ಮಾನ ಮಹಾದೇವ ಗಣಪತಿ ಭಜನಾ ಮಂಡಳಿ ದೇಲಂಪುರಿ ವೇಣೂರು ಕುಣಿತ ಭಜನೆ ಇತ್ತು. ಸುಡುಮದ್ದು ಪ್ರದರ್ಶನದೊಂದಿಗೆ ಬ್ರಹ್ಮ ರತೋತ್ಸವ ರಥಬೀದಿಯಲ್ಲಿ ವಿಜೃಂಭಣೆಯಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು