12:39 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು