12:58 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ. ರಸ್ತೆ ಕಾಮಗಾರಿ ಆಗ್ರಹಿಸಿ ಪ್ರತಿಭಟನೆ

08/02/2025, 12:11

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ.ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ 27ರ ಕನ್ನಾಪುರ ಸರ್ಕಲ್‌ನಿಂದ ಬೇವಿನಗುಡ್ಡೆವರೆಗೆ 5 ಕಿ,ಮೀ ರಸ್ತೆ ಅಗಲೀಕರಣದ ಜತೆಗೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಇದಕ್ಕೆ ಸ್ಥಳೀಯರಿಬ್ಬರು ತಕರಾರು ಮಾಡಿದ್ದರಿಂದ ಸುತ್ತಮುತ್ತಲಿನ ಗ್ರಾಮದ ಜನರು ಶುಕ್ರವಾರ ಸ್ಥಳಕ್ಕೆ ಆಗಮಿಸಿ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಪ್ರತಿಭಟನೆ ನಡೆಸಿದರು.


ಕನ್ನಾಪುರ ಸರ್ಕಲ್ ಬಳಿ ಹಾದು ಹೋಗಿರುವ ರಾಜ್ಯ ಹೆದ್ದಾರಿ ರಸ್ತೆ ತಮಗೆ ಸೇರಿದ ಕರಾಬ್ ಜಮೀನಿನ ಮೇಲೆ ಹಾದು ಹೋಗಿದೆ. ಹಾಗಾಗಿ ಇಲ್ಲಿ ರಸ್ತೆ ಮಾಡಬಾರದೆಂದು ಸ್ಥಳೀಯ ಇಬ್ಬರು ವ್ಯಕ್ತಿಗಳು ರಸ್ತೆ ಕಾಮಗಾರಿ ನಡೆಸುವ ಮುನ್ನ ಅಧಿಕಾರಿಗಳಿಂದ ಸರ್ವ ನಡೆಸಬೇಕು. ಅಲ್ಲಿವರೆಗೆ ಕಾಮಗಾರಿ ನಿಲ್ಲಿಸಬೇಕೆಂದು ಅಡ್ಡಿ ಪಡಿಸಿದ್ದರಿಂದ ಆ ಸ್ಥಳದಲ್ಲಿ ಕಾಮಗಾರಿ ನಿಲ್ಲಿಸಿ ಬೇರೆ ಕಾಮಗಾರಿ ಮುಂದುವರೆಸಲಾಗಿತ್ತು. ಈ ಹಿನ್ನಲೆಯಲ್ಲಿ ಕನ್ನಾಪುರ ಸುತ್ತಮುತ್ತಲಿನ ಗ್ರಾಮದ ನೂರಾರು ಮಂದಿ ಸ್ಥಳಕ್ಕೆ ಆಗಮಿಸಿ, ಮೂಡಿಗೆರೆಯಿಂದ ಗೆಂಡೇಹಳ್ಳಿ ಮೂಲಕ ಹಾದು ಹೋಗಿರುವ ವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿ (27) ಬ್ರಿಟೀಷರ ಕಾಲದಲ್ಲಿಯೇ ನಿರ್ಮಾಣವಾಗಿತ್ತು. ಈಗ ಕಾಮಗಾರಿ ನಡೆಯುವ ಸಂದರ್ಭದಲ್ಲಿ ತಕರಾರು ಮಾಡುವುದು ಸರಿಯಲ್ಲ. ಯಾರೋ ಇಬ್ಬರಿಗಾಗಿ ರಸ್ತೆ ಬಂದ್ ಮಾಡುವುದಕ್ಕೆ ನಾವು ಬಿಡುವುದಿಲ್ಲ. ರಸ್ತೆ ಕಾಮಗಾರಿ ಮುಂದುವರೆಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನಂದಿಪುರ ಗ್ರಾ.ಪಂ. ಸದಸ್ಯ ರಘು, ಗಬ್ಬಳ್ಳಿ ಚಂದ್ರೇಗೌಡ, ಜಯರಾಂಗೌಡ, ಪರಮೇಶ್, ಕನ್ನಾಪುರದ ಶಿವೇಗೌಡ, ಸಚಿನ್, ರಂಗಯ್ಯ, ಸುಂದ್ರೇಶ್, ಸಚಿನ್ . ಸುಜಯ್ .ರವಿಗೌಡ ಸಂಗಮಪುರ, ಶಶಿಧರ್ ಮಾಲೂರು, ರಾಜೇಗೌಡ ಎಸ್.ಹೊಸಳ್ಳಿ ಮೂಡಿಗೆರೆ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ. ಲೋಕೋಪಯೋಗಿ ಇಂಜಿನಿಯರ್ ಚೆನ್ನಯ್ಯ. ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು