5:31 AM Tuesday11 - November 2025
ಬ್ರೇಕಿಂಗ್ ನ್ಯೂಸ್
Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:…

ಇತ್ತೀಚಿನ ಸುದ್ದಿ

ಆಪ್‌ ಪಕ್ಷವನ್ನು ದೆಹಲಿ ಜನರು ತಿರಸ್ಕಾರ ಮಾಡಿದ್ದಾರೆ; ಇಂಡಿ ಒಕ್ಕೂಟ ಒಡೆದು ಚೂರಾಗಿದೆ: ಆರ್.ಅಶೋಕ್

09/02/2025, 09:37

ಬೆಂಗಳೂರು(reporterkarnataka.com): ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಕ್ಕೆ ಸಿಕ್ಕಿರುವ ಗೆಲುವು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್‌ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಅರವಿಂದ ಕೇಜ್ರಿವಾಲ್‌ ಆರಂಭದಲ್ಲಿ ಸರಳವಾದ ಕಾರಿನಲ್ಲಿ ಸಂಚರಿಸುತ್ತಿದ್ದರು. ಈಗ ದೊಡ್ಡ ಅರಮನೆ ಕಟ್ಟಿಕೊಂಡಿದ್ದು, ಐಷಾರಾಮಿ ಕಾರಿನಲ್ಲಿ ಸಂಚರಿಸುತ್ತಿದ್ದಾರೆ. ಅವರ ಆಡಳಿತವನ್ನು ನೋಡಿ ಜನರು ಬೇಸತ್ತಿದ್ದಾರೆ. ಯಮುನಾ ನದಿಯ ಬಗ್ಗೆ ಅವರು ಆಡಿದ ಮಾತು ಜನರಲ್ಲಿ ಬೇಸರ ತಂದಿದೆ. ಜನರು ಪ್ರತಿ ದಿನ ಕುಡಿಯುವ ನೀರಿನ ಬಗ್ಗೆ ಆಪಾದನೆ ಮಾಡಿದ್ದರು ಎಂದರು.
ಯಮುನಾ ನದಿಯನ್ನು ಸರ್ಕಾರ ಸ್ವಚ್ಛವಾಗಿ ಇಡಬೇಕಿತ್ತು. ಅದನ್ನು ಬಿಟ್ಟು ನದಿಯ ಮೇಲೆಯೇ ಆಪಾದನೆ ಮಾಡಿದ್ದರು. ಜೈಲಿಗೆ ಹೋದರೂ ರಾಜೀನಾಮೆ ನೀಡದೆ ಅಲ್ಲಿಯೇ ಕುಳಿತು ಕಡತಕ್ಕೆ ಸಹಿ ಹಾಕಿದ್ದರು. ಬೇರೆಯವರಿಗೆ ಅಧಿಕಾರವನ್ನು ವಹಿಸುವ ಬದಲು, ತಾವೇ ಅಧಿಕಾರ ಇಟ್ಟುಕೊಂಡು ಸರ್ಕಾರಿ ಕೆಲಸಗಳನ್ನು ಸ್ಥಗಿತಗೊಳಿಸಿದ್ದರು. ಇವರು ಭ್ರಷ್ಟಚಾರಿ ಎಂದು ಇಂಡಿ ಒಕ್ಕೂಟದ ನಾಯಕರೇ ಹೇಳಿದ್ದರು. ಮಳ್ಳಿಯಂತೆ ಬಂದು, ಕಳ್ಳನಂತೆ ಆಗಿದ್ದಾರೆ ಎಂಬುದು ಜನರಿಗೆ ಅರಿವಾಯಿತು ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ವರ್ಚಸ್ಸು ಹಾಗೂ ಆಡಳಿತ ಬಿಜೆಪಿಯ ಗೆಲುವಿಗೆ ಬಲ ತಂದಿದೆ. ಇದು ಕೇಂದ್ರ ಸರ್ಕಾರದ ಆಡಳಿತಕ್ಕೆ ಸಂದ ಗೆಲುವು. ಜನರು ಇಂಡಿ ಒಕ್ಕೂಟವನ್ನು ತಿರಸ್ಕಾರ ಮಾಡಿದ್ದಾರೆ. ಇಂಡಿ ಒಕ್ಕೂಟ ಒಡೆದು ಚೂರಾಗಿದೆ. ಅಖಿಲೇಶ್‌ ಯಾದವ್‌, ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರೂ ಬೇರೆಯಾಗಿದ್ದಾರೆ. ರಾಹುಲ್‌ ಗಾಂಧಿಯೂ ಸೇರಿದಂತೆ ಒಂದೇ ಕುಟುಂಬದವರು ದೊಡ್ಡ ಅವಕಾಶಗಳನ್ನು ಪಡೆದುಕೊಂಡಿದ್ದಾರೆ. ದೆಹಲಿಯ ಜನರು ಮೋದಿಯವರ ಆಡಳಿತಕ್ಕೆ ಬೆಲೆ ಕೊಟ್ಟಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು