5:50 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ

09/02/2025, 21:12

ಶಿವು ರಾಠೋಡ ಹುಣಸಗಿ ವಿಜಯಪುರ

info.reporterkarnataka@gmail.com
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
*ಭಕ್ತಿ ಅರ್ಪಣೆ:* ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು 200 ಮೀಟರ್ ದೂರದ ಪಾದ ಗಟ್ಟೆದರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
*ಶಾಸಕರಿಂದ ಚಾಲನೆ:* ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ
ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು. ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ_ ಹಾಲಿ ಸದಸ್ಯರಾದ ಹೃತ್ತಿರಾದ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
*ಬಿಗಿ ಬಂದೋಬಸ್ತ್:* ರಥೋತ್ಸವಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹದ ಫೈಜುದ್ದಿನ್, ಪಿಎಸೈ ತಿಪ್ಪಾರೆಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು