10:26 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಮುದ್ದೇಬಿಹಾಳ: ಭಕ್ತಸಾಗರದ ನಡುವೆ ನಾಲತವಾಡ ಅಯ್ಯನಗುಡಿ ರಥೋತ್ಸವ; ಪಲ್ಲಕ್ಕಿ ಮೆರವಣಿಗೆ

09/02/2025, 21:12

ಶಿವು ರಾಠೋಡ ಹುಣಸಗಿ ವಿಜಯಪುರ

info.reporterkarnataka@gmail.com
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ನಾಲತವಾಡ ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕವಾದ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ನಡೆಯಿತು.

ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಹಾಗೂ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
*ಭಕ್ತಿ ಅರ್ಪಣೆ:* ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು 200 ಮೀಟರ್ ದೂರದ ಪಾದ ಗಟ್ಟೆದರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
*ಶಾಸಕರಿಂದ ಚಾಲನೆ:* ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ
ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು. ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ_ ಹಾಲಿ ಸದಸ್ಯರಾದ ಹೃತ್ತಿರಾದ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
*ಬಿಗಿ ಬಂದೋಬಸ್ತ್:* ರಥೋತ್ಸವಕ್ಕೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹದ ಫೈಜುದ್ದಿನ್, ಪಿಎಸೈ ತಿಪ್ಪಾರೆಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು