9:54 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

10/02/2025, 21:32

ಮಂಗಳೂರು(reporterkarnataka.com): ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ಭಾನುವಾರ ನಗರದ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.
ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ ವರ್ಗದ ಕಷ್ಟಗಳಿಗೆ ನೆರವಾಗಲಾಗಿದೆ. ಹಲವಾರು ಕುಟುಂಬಗಳ ಕಣ್ಣೀರು ಒರೆಸುವ ಕೆಲಸಗಳಾಗಿವೆ. ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಸದ್ದಿಲ್ಲದೆ ಕೆಲಸ ಮಾಡುವ ಸಂಘಟನೆಯಾಗಿದೆ. ದೇವರ ಕೃಪೆ ಇದ್ದಲ್ಲಿ ನಮ್ಮ ಅಸಾಹಾಯಕತೆಯಲ್ಲೂ ಉತ್ತಮ ಕಾರ್ಯಗಳನ್ನುಮಾಡಲು ಸಾಧ್ಯವಿದೆ ಎಂದರು.
ಮಂಗಳೂರು ಸೆಂಟ್ರಲ್‌ ಕೌನ್ಸಿಲ್‌ನ ಆಧ್ಯಾತ್ಮಿಕ ಸಲಹೆಗಾರ ವಂ। ಫ್ರಾನಿಸ್‌ ಡಿ’ಸೋಜಾ ಶತಮಾನೋತ್ಸವದ ಫೋಷಣೆ ವಾಕ್ಯವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಂಗಳೂರು ಧರ್ಮಪ್ರಾಂತ್ಯದಲ್ಲಿ ಕಳೆದ ನೂರು ವರ್ಷಗಳಲ್ಲಿ ಹೊಸ ಶಕೆಯನ್ನು ಸಂಘಟನೆ ಬರೆದಿದೆ. ಹಿರಿಯರ ಮೂಲಕ ಸೇವೆ ಮಾಡಲು ಹಾಗೂ ಬಡವರ್ಗಕ್ಕೆ ನೆರವಾಗುವ ಕಾರ್ಯ ವಿಶಿಷ್ಟವಾದುದು. ವಿದ್ಯಾರ್ಥಿವೇತನ, ಬಡ ಕುಟುಂಬಗಳಿಗೆ ಆರ್ಥಿಕ ನೆರವು, ರೋಗಿಗಳಿಗೆ ಚಿಕಿತ್ಸೆಗೆ ಧನ ಸಹಾಯ ಸಹಿತ ನೂರಾರು ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿವೆ ಎಂದರು.


ಸೆಂಟ್ರಲ್‌ ಕೌನ್ಸಿಲ್‌ನ ಅಧ್ಯಕ್ಷ ಜ್ಯೋ ಕುವೆಲ್ಲೋ ಮಾತನಾಡಿ, ಶತಮಾನೋತ್ಸವದ ಸವಿನೆನಪಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿದೆ. ಅವುಗಳಲ್ಲಿ ಪ್ರಮುಖವಾಗಿ ಎಸ್‌.ಎಸ್‌.ವಿ.ಪಿ.ಯ ದತ್ತು ಕುಟಂಬಗಳ ಸುಮಾರು 408 ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವು, ‘ಆಸ್ರೊ’ ನೂರು ಕುಟಂಬಗಳಿಗೆ ತಮ್ಮ ಮನೆಗಳನ್ನು ನಿರ್ಮಿಸಲು ಅಥವಾ ದುರಸ್ತಿ ಮಾಡಲು ಧನ ಸಹಾಯ ನೀಡಲು ನಿರ್ಧಾರ ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು