6:36 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು