6:59 AM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು