1:29 PM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು