11:43 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಬೀರೂರು: ರಥ ಟರ್ನ್ ಆಗಲು ಜಾಗದ ವಿವಾದ ತಣ್ಣಗಾಗುತ್ತಿದ್ದಂತೆ ಹೊತ್ತಿ ಉರಿದ ಟ್ರ್ಯಾಕ್ಟರ್, ಹುಲ್ಲಿನ ಬವಣೆ

11/02/2025, 13:22

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಡೂರು ತಾಲೂಕಿನ ಬೀರೂರು ಸಮೀಪದ ದೊಡ್ಡಘಟ್ಟ ಗ್ರಾಮದ ದೇವಸ್ಥಾನದ ಜಾತ್ರ್ಯೋತ್ಸವ ರಥ ಟರ್ನ್ ಆಗಲು ಜಾಗದ ಉದ್ಭವಿಸಿದ ವಿವಾದ ತಣ್ಣಗಾಗುತ್ತಿದ್ದಂತೆ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿದ ಘಟನೆ ನಡೆದಿದೆ.
ವಿವಾದ ತಣ್ಣಗಾದ ಬಳಿಕವೂ ಟ್ರ್ಯಾಕ್ಟರ್ ಹಾಗೂ ಹುಲ್ಲಿನ ಬವಣೆ ಹೊತ್ತಿ ಉರಿಯಿತು.


ಕಿಡಿಗೇಡಿಗಳು ಬೆಂಕಿ ಹಾಕಿದ್ರೋ ಅಥವಾ ಅಚಾನಕ್ಕಾಗಿ ಬೆಂಕಿ ಹತ್ತಿದ್ಯೋ ಎನ್ನುವ ಮಾಹಿತಿ ಲಭ್ಯವಾಗಲಿಲ್ಲ. ಶೆಡ್ ನಲ್ಲಿ ನಿಂತಿದ್ದ ಟ್ರ್ಯಾಕ್ಟರ್, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಕರಕಲಾಗಿದೆ.
ಮುಂದಿನ ತಿಂಗಳು ದೊಡ್ಡಘಟ್ಟ ಗ್ರಾಮದಲ್ಲಿ ಜಾತ್ರೆ ಇತ್ತು. ರೋಡ್ ಸೈಡ್ ದೇವಸ್ಥಾನವಾದ ಕಾರಣ ರಥ ತಿರುಗಲು (ಟರ್ನ್) ಆಗಲು ಜಾಗದ ಸಮಸ್ಯೆ ಇತ್ತು.
ದೇವಸ್ಥಾನದ ಎದುರಿನ ಮನೆಯವರಿಗೆ ದೇವಸ್ಥಾನಕ್ಕೆ ಸ್ವಲ್ಪ ಜಾಗ ಬಿಡುವಂತೆ ಊರಿನ ಜನರು ಕೇಳಿದ್ದರು.
ಅವರು ದೇವಸ್ಥಾನಕ್ಕೆ ಶಾಶ್ವತವಾಗಿ ಜಾಗ ಬಿಡಲು ನಿರಾಕರಿಸಿದ್ದರು. ವಿಷಯಕ್ಕೆ ಸಂಬಂಧಿಸಿದಂತೆ
ಗ್ರಾಮಸ್ಥರ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದಿತ್ತು.
ಬೀರೂರು ಠಾಣೆಯಲ್ಲಿ ಎರಡೂ ಕಡೆಯಿಂದ ದೂರು-ಪ್ರತಿದೂರು ದಾಖಲಾಗಿತ್ತು. ಸ್ಥಳಕ್ಕೆ ಬೀರೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು