5:49 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: 16 ದೇಶಗಳ ರಾಯಭಾರಿಗಳು ಭಾಗಿ; ಸಚಿವರ, ಉದ್ಯಮಿಗಳ ದಂಡು

11/02/2025, 21:19

ಬೆಂಗಳೂರು(reporterkarnataka.com):ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ.
ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ.
*ಸಚಿವರ, ಉದ್ಯಮಿಗಳ ದಂಡು:* ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ರಾಜನಾಥಸಿಂಗ್, ಪ್ರಹ್ಲಾದ್ ಜೋಶಿ, ರಾಜ್ಯ ಸಂಪುಟದ ಸಚಿವರಾದ ಜಿ.ಪರಮೇಶ್ವರ, ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ. ಎಂ ಸಿ ಸುಧಾಕರ್ ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಡಾ.ಶರಣ ಪ್ರಕಾಶ ಪಾಟೀಲ, ಶಿವಾನಂದ‌ ಪಾಟೀಲ ಕೂಡ ಹಾಜರಿದ್ದರು.
ಗಣ್ಯ ಉದ್ಯಮಿಗಳಾದ ಆನಂದ್ ಮಹೀಂದ್ರ, ಸಜ್ಜನ್ ಜಿಂದಾಲ್, ಕಿರಣ್ ಮಜುಂದಾರ್ ಷಾ, ಗೀತಾಂಜಲಿ ಕಿರ್ಲೋಸ್ಕರ್, ರಾಹುಲ್ ಬಜಾಜ್, ಶೇಷ ವರದರಾಜನ್, ಪ್ರಶಾಂತ್ ಪ್ರಕಾಶ್ ಮುಂತಾದವರು ಕೂಡ ಪಾಲ್ಗೊಂಡಿದ್ದರು. ಇವರನ್ನೆಲ್ಲ ಸಚಿವ ಎಂ. ಬಿ. ಪಾಟೀಲ್ ಅವರು ಶಾಲು ಹೊದಿಸಿ, ಕಾಣಿಕೆ ನೀಡಿ, ರಾಜ್ಯದ ಪರವಾಗಿ ಬರಮಾಡಿಕೊಂಡರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು