1:18 PM Friday13 - March 2026
ಬ್ರೇಕಿಂಗ್ ನ್ಯೂಸ್
ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

ಇತ್ತೀಚಿನ ಸುದ್ದಿ

ಜಾಗತಿಕ ಹೂಡಿಕೆದಾರರ ಸಮಾವೇಶ: 16 ದೇಶಗಳ ರಾಯಭಾರಿಗಳು ಭಾಗಿ; ಸಚಿವರ, ಉದ್ಯಮಿಗಳ ದಂಡು

11/02/2025, 21:19

ಬೆಂಗಳೂರು(reporterkarnataka.com):ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಉದ್ಯಮ ಪ್ರತಿನಿಧಿಗಳಲ್ಲದೆ, ಹಲವು ದೇಶಗಳ ರಾಯಭಾರಿಗಳು ಕೂಡ ಭಾಗವಹಿಸಿದ್ದಾರೆ.
ಇವರಲ್ಲಿ ಬಹ್ರೇನ್ ರಾಯಭಾರಿ ಮಹಮದ್ ಅಲ್ ಗಾವ್ಡ್, ಕ್ಯೂಬಾದ ಅಬೆಲ್ ಅಬಾಲ್ ಡೆಸ್ಪೇನ್, ಇಟಲಿಯ ಆಂಟೋನಿಯೊ ಬಾರ್ತೋಲಿ, ನೇಪಾಳದ ಡಾ.ಶಂಕರ್ ಪ್ರಸಾದ್ ಶರ್ಮ, ಪೋಲೆಂಡಿನ ಸೆಬಾಸ್ಟಿಯನ್ ಡಾಮ್ಜಾಲ್ಸ್ಕಿ, ಮಲೇಷ್ಯಾದ ದಾತೊ ಮಜಾಫರ್ ಷಾ ಮುಸ್ತಫ, ಜಪಾನಿನ ಓನೋ ಕೀಚಿ, ಕಾಂಗೋದ ರೇಮಂಡ್ ಸರ್ಜ್ ಬೇಲ್, ಜಮೈಕಾದ ಜೇಸನ್ ಹಾಲ್ ಫಿಜಿಯ ಜಗನ್ನಾಥ ಸ್ವಾಮಿ, ಜಮೈಕಾದ ಜೇಸನ್ ಹಾಲ್, ಕಝಕಸ್ತಾನದ ನೂರುಲಾನ್ ಝಲ್ಗಸ್ಬಯೇವ್, ಮೊರಾಕ್ಕೋದ ಮಹಮದ್ ಮಾಲೀಕಿ, ಸೀಷೆಲ್ಸ್ ನ ಲಲಟಿಯಾನಾ ಅಕೌಷೆ, ತಝಕಿಸ್ತಾನದ ಲೂಕ್ಮನ್ ಬೊಬಕಾಲೊಜೋಡ, ಟೋಗೋದ ಯಾವೋ ಇಡೆಂ ಮತ್ತು ಜಿಂಬಾಬ್ವೆಯ ಸ್ಟೆಲ್ಲಾ ನೋಮೋ ಸೇರಿದ್ದಾರೆ.
*ಸಚಿವರ, ಉದ್ಯಮಿಗಳ ದಂಡು:* ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ರಾಜನಾಥಸಿಂಗ್, ಪ್ರಹ್ಲಾದ್ ಜೋಶಿ, ರಾಜ್ಯ ಸಂಪುಟದ ಸಚಿವರಾದ ಜಿ.ಪರಮೇಶ್ವರ, ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ. ಎಂ ಸಿ ಸುಧಾಕರ್ ಎಚ್ ಸಿ ಮಹದೇವಪ್ಪ, ಕೆ ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಡಾ.ಶರಣ ಪ್ರಕಾಶ ಪಾಟೀಲ, ಶಿವಾನಂದ‌ ಪಾಟೀಲ ಕೂಡ ಹಾಜರಿದ್ದರು.
ಗಣ್ಯ ಉದ್ಯಮಿಗಳಾದ ಆನಂದ್ ಮಹೀಂದ್ರ, ಸಜ್ಜನ್ ಜಿಂದಾಲ್, ಕಿರಣ್ ಮಜುಂದಾರ್ ಷಾ, ಗೀತಾಂಜಲಿ ಕಿರ್ಲೋಸ್ಕರ್, ರಾಹುಲ್ ಬಜಾಜ್, ಶೇಷ ವರದರಾಜನ್, ಪ್ರಶಾಂತ್ ಪ್ರಕಾಶ್ ಮುಂತಾದವರು ಕೂಡ ಪಾಲ್ಗೊಂಡಿದ್ದರು. ಇವರನ್ನೆಲ್ಲ ಸಚಿವ ಎಂ. ಬಿ. ಪಾಟೀಲ್ ಅವರು ಶಾಲು ಹೊದಿಸಿ, ಕಾಣಿಕೆ ನೀಡಿ, ರಾಜ್ಯದ ಪರವಾಗಿ ಬರಮಾಡಿಕೊಂಡರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿ ಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಸೆಲ್ವಕುಮಾರ್ ಸೇರಿದಂತೆ ಇತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು