1:12 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Chitradurga | ಚಳ್ಳಕೆರೆ: ನಿಧಿಯಾಸೆಗೆ ನರಬಲಿ; ಡ್ರಾಪ್ ಕೊಡುವ ನೆಪದಲ್ಲಿ ಕೊಲೆ; ಜ್ಯೋತಿಷಿ ಸಹಿತ ಇಬ್ಬರ ಬಂಧನ

12/02/2025, 18:37

ಮುರುಡೇಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ವ್ಯಕ್ತಿಯೋರ್ವನನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು ನಿಧಿಯಾಸೆಗಾಗಿ ನರಬಲಿ ಕೊಟ್ಟಿರುವ ಘಟನೆ ಚಿತ್ರದುರ್ಗ ಚಳ್ಳಕೆರೆ ತಾಲ್ಲೂಕಿ ಪರಾಶುರಂಪುರದ ಜೆ ಜೇ ಕಾಲೋನಿಯಲ್ಲಿ ನಡೆದಿದೆ.
ಪಾವಗಡ ಮೂಲದ ಜ್ಯೋತಿಷಿಯೊಬ್ಬರ ಮಾತು ನಂಬಿದ ಆಂಧ್ರ ಮೂಲದ ಆನಂದ ರೆಡ್ಡಿ ಎಂಬಾತ ನಿಧಿಯಾಸೆಗಾಗಿ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುತ್ತಿದ್ದ ಜೆಜೆ ಕಾಲೊನಿ ನಿವಾಸಿ ಪ್ರಭಾಕರ ಎಂಬಾತನನ್ನು ಕರೆದೊಯ್ದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ನರಬಲಿ ಕೊಟ್ಟಿದ್ದಾನೆ. ಡಾಬಾವೊಂದರಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಆನಂದ್ ರೆಡ್ಡಿ, ಪಾವಗಡದ ಕೋಟಗುಡ್ಡ ನಿವಾಸಿ ಜ್ಯೋತಿಷಿ ರಾಮಕೃಷ್ಣನ ಬಳಿ ಜ್ಯೋತಿಷ ಕೇಳಿದ್ದ. ನಿಧಿಸಿಗಬೇಕೆಂದರೆ ನರಬಲಿಕೊಡಬೇಕು ಎಂದಿದ್ದಾನೆ.
/
ಪರಶುರಾಮಪುರ ಪಶ್ಚಿಮದಲ್ಲಿ ನರಬಲಿ ಕೊಟ್ಟರೆ ನಿಧಿ ಸಿಗುತ್ತದೆ. ಆ ರಕ್ತವನ್ನು ಮಾರಮ್ಮ ದೇವಿಗೆ ಅರ್ಪಿಸು ಎಂದಿದ್ದನಂತೆ. ಜ್ಯೋತಿಷಿ ಮಾತು ಕೇಳಿದ ಆನಂದ ರೆಡ್ಡಿ, ಭಾನುವಾರ ಸಂಜೆ ಪಶ್ಚಿಮ ದಿಕ್ಕಿನಲ್ಲಿ ಬಂದ ಪ್ರಭಾಕರನ ಬರ್ಬರ ಹತ್ಯೆ ಮಾಡಿದ್ದಾನೆ.
ಪ್ರಭಾಕರ ಪರಾಶುರಂಪುರದ ಬಸ್ ನಿಲ್ದಾಣದ ಬಳಿ ಚಪ್ಪಲಿ ಹೊಲಿಯುವ ಕೆಲಸ ಮಾಡುತ್ತಿದ್ದ. ಅದೇ ಮಾರ್ಗವಾಗಿ ನಡೆದು ಬರುತ್ತಿದ್ದ ಆತನನ್ನು ಕಂಡ ಆನಂದ ರೆಡ್ಡಿ ಬೈಕ್ ನಿಲ್ಲಿಸಿ ಡ್ರಾಪ್ ಕೊಡುತ್ತೇನೆ ಬನ್ನಿ ಎಂದು ಕರೆದೊಯ್ದಿದ್ದಾನೆ. ಬಳಿಕ ಮಾರಕಾಸ್ತ್ರಗಳಲ್ಲಿ ಕೊಚ್ಚಿ ಕೊಲೆ ಮಾಡಿದ್ದಾನೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಜ್ಯೋತಿಷಿ ರಾಮಕೃಷ್ಣ ಹಾಗೂ ಆರೋಪಿ ಆನಂದ ರೆಡ್ಡಿ ಇಬ್ಬರನ್ನೂ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು