1:15 AM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

Dharma Sabha |ಕಟ್ಟೆಮಾರು: ಮಂತ್ರ ದೇವತೆಗೆ ದೊಂದಿ ಬೆಳಕಿನಲ್ಲಿ ವೈಭವದ ಕೋಲೋತ್ಸವ; ಧಾರ್ಮಿಕ ಸಭೆ

12/02/2025, 19:45

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಟ್ಟೆಮಾರು ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿದ್ಯ , ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವಾರ್ಷಿಕ ಕೋಲೋತ್ಸವ ದೊಂದಿ ಬೆಳಕಿನಲ್ಲಿ ವೈಭವದಲ್ಲಿ ನಡೆಯಿತು.
ಧಾರ್ಮಿಕ ಸಭೆಯಲ್ಲಿ ಮಾತನಾಡಿದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಭಾರತವು ಅತಿ ಪುರಾತನ ಸನಾತನ ಸಂಸ್ಕೃತಿಯನ್ನು ಹೊಂದಿದ್ದು ವಿಶ್ವದಲ್ಲೇ ತನ್ನ ಸಂಸ್ಕೃತಿ ಸಂಸ್ಕಾರಗಳಿಂದ ಹೆಸರು ಪಡೆದ ದೇಶ. ಆದರೆ ಇಂದಿನ ಯುವ ಜನಾಂಗ ಪಾಶ್ಚಾತ್ಯದ ಕಡೆಗೆ ವಾಲುತ್ತಿರುವುದು ವಿಪರ್ಯಾಸವೇ ಆಗಿದೆ. ಇದಕ್ಕೆ ಮೂಲ ಕಾರಣ ಮನೆಗಳಲ್ಲಿ ಸಂಸ್ಕಾರಯುತ ಶಿಕ್ಷಣವು ಕಡಿಮೆಯಾಗುತ್ತಿರುವುದು ಎಂದರು.
ಮನೆಯಲ್ಲಿ ಮಗುವಿಗೆ ಧಾರ್ಮಿಕ ಶಿಕ್ಷಣ ನೀಡುವುದರ ಮೂಲಕ ನಮ್ಮ ಸಂಸ್ಕೃತಿಯನ್ನು ಭದ್ರ ಪಡಿಸಿಕೊಳ್ಳಬೇಕು. ಮನೆ ಮಂದಿ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ಕೊಡುತ್ತಿರುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು. ನಮ್ಮ ಹಿರಿಯರಿಂದ ಬಂದ ಸಂಸ್ಕೃತಿ ನಂಬಿಕೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ನುಡಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 10 ಮಂದಿ ಮಹನೀಯರನ್ನು ಸನ್ಮಾನಿಸಲಾಯಿತು. 14 ಮಂದಿಗೆ ಆರೋಗ್ಯ ಸಮಸ್ಯೆ, ಮನೆ ರಿಪೇರಿ, ಮದುವೆ, ಶಿಕ್ಷಣದ ಸಲುವಾಗಿ ಅರ್ಹರನ್ನು ಹುಡುಕಿ ಧನಸಹಾಯ ಮಾಡಲಾಯಿತು.
ಸರಕಾರಿ ಶಾಲೆಗಳಾದ ನಡುಮೊಗೇರು, ಏಮಾಜೆ, ಬೊಂಡಾಲ ಶಾಲೆಗಳಿಗೆ ಸ್ಮಾರ್ಟ್ ಟಿವಿ ಹಾಗೂ ನಲ್ಕೇಮಾರ್ ಶಾಲೆಗೆ ಲ್ಯಾಪ್ಟಾಪ್ ನೀಡಲಾಯಿತು.


“ಕಟ್ಟೆಮಾರ್ದ ಸ್ವರ್ಣ ತುಡಾರ್” ಮತ್ತು “ಕಟ್ಟೆಮಾರ್ದ ಕರ್ತೆದಿ ” ಆಲ್ಬಮ್ ಸಾಂಗ್ ಲೋಕಾರ್ಪಣೆ ಮಾಡಲಾಯಿತು. ಚಿಂತಾಮಣಿ ಕಡೇಶಿವಾಲಯ ಇವರಿಂದ ಭಕ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ವೇದಿಕೆಯಲ್ಲಿ ಮಧ್ಯಪ್ರದೇಶ ಉಜ್ಜಯಿನಿಯ ಅಖಿಲ ಭಾರತೀಯ ನಾಥ ಸಂಪ್ರದಾಯ ಬರ್ತ್ರ್ ವರಿ ಗುಫಾ ಮಠಾಧೀಶರಾದ ಯೋಗಿ ಪೀರ್ ರಾಮನಾಥ್ ಜಿ ಮಹಾರಾಜ್, ಹಿಂದೂ ರಾಷ್ಟ್ರ ಸೇವಾ ಸಮಿತಿಯ ರಾಜ್ಯ ಅಧ್ಯಕ್ಷ ಸಂದೀಪ್ ನಾಥ್ , ದಕ್ಷಿಣ ಕನ್ನಡ ಕೃಷಿ ಅಭಿವೃದ್ಧಿ ಸಹಕಾರಿ ಸಂಘದ ಅಧ್ಯಕ್ಷ ಕೆ. ರವೀಂದ್ರ ಕಂಬಳಿ,ಅಶೋಕ್ ಪೂಜಾರಿ ಮುಂಬೈ, ಪ್ರಶಾಂತ್ ಬನ್ನನ್ ಮಾಲಕರು ತಾಜ್ ರೆಸಿಡೆನ್ಸಿ ಮಂಗಳೂರು, ಆಶ್ರಿತ್ ಕಿಶನ್ ಹೆಬ್ಬೇವು ಫಾರ್ಮ್ಸ್ ಫೆನ್ ಕೊಂಡ, ತಾರನಾಥ ಪೂಜಾರಿ ಹೋಟೆಲ್ ನೀಲ್ ಕಮಲ್ ಉಡುಪಿ, ಪ್ರವೀಣ್ ಕೊಟ್ಟಾರಿ ರಾಯಪ್ಪ ಕೋಡಿ, ತಾರನಾಥ ಸಾಲಿಯಾನ್ , ನಟೇಶ್ ಪೂಜಾರಿ ಪುಳಿತಡಿ, ಧನರಾಜ್ ಪೂಜಾರಿ ಬೆಂಗಳೂರು, ಪುತ್ತೂರು ಮಾಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಿನಯ ಸುವರ್ಣ, ಕಿಶೋರ್ ಕುಮಾರ್ ಕಟ್ಟೆಮಾರು ಉಪಸ್ಥಿತರಿದ್ದರು.
ಬಂಟ್ವಾಳ ಕ್ಷೇತ್ರ ಶಾಸಕ ರಾಜೇಶ್ ನಾಯಕ್, ಚಿತ್ರನಟಿ ನವ್ಯ ಪೂಜಾರಿ ಆಗಮಿಸಿ ಶ್ರೀ ದೈವದ ಗಂಧ ಪ್ರಸಾದ ಸ್ವೀಕರಿಸಿದರು.
ಶ್ರೀ ಮಂತ್ರ ದೇವತಾ ಸಾನಿಧ್ಯ ಕಟ್ಟೆಮಾರಿನ ಧರ್ಮದರ್ಶಿ ಶ್ರೀ ಮನೋಜ್ ಕುಮಾರ್ ಕಟ್ಟೆಮಾರು ಸ್ವಾಗತಿಸಿ, ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು