12:38 AM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಹೊಸ ಕೈಗಾರಿಕಾ ನೀತಿ: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳ ಸೃಷ್ಟಿ

14/02/2025, 19:05

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಸಚಿವರು ಈ ಸಂದರ್ಭಭದಲ್ಲಿ ಹೇಳಿದರು.


ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ನುಡಿದರು.
ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ, ನಮ್ಮಲ್ಲಿ ಸಂಪನ್ಮೂಲಗಳು ಮಾತ್ರವಲ್ಲದೆ, ಕೌಶಲ್ಯವೂ ಸೇರಿ ಹೂಡಿಕೆದಾರರಿಗೆ ಉತ್ತಮ ವಾತಾವರಣ ಕಲ್ಪಿಸುತ್ತದೆ ಎಂದೂ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸಚಿವ ವಿ.ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌, ಸಚಿವರು, ಶಾಸಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು