1:10 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕಟೀಲು ಮೇಳದ ಹಿರಿಯ ಹಾಸ್ಯಗಾರ ರವಿಶಂಕರ ವಳಕುಂಜರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

15/02/2025, 17:48

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಟೀಲು‌ ಮೇಳದ ತೆಂಕುತಿಟ್ಟಿನ ಹಿರಿಯ ಕಲಾವಿದ, ಹಾಸ್ಯಗಾರ ರವಿಶಂಕರ ವಳಕುಂಜ ಅವರನ್ನು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಸಮಿತಿ ವತಿಯಿಂದ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಶನಿವಾರ ಶಂಬೂರು ಗ್ರಾಮದ ಬೊಂಡಾಲದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯಕ್ಷಗಾನ ಬಯಲಾಟ ಸೇವೆಯ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷ ತೆಯಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗೌರವ ಅತಿಥಿಗಳಾಗಿ ಅನಂತ ಪದ್ಮನಾಭ ಅಸ್ರಣ್ಣ ಕಟೀಲು ಅವರು ಶುಭಹಾರೈಸಿ ಆಶೀರ್ವಚನ ನೀಡಿ ಮಾತನಾಡಿದರು. ಧಾರ್ಮಿಕ ಪರಿಷತ್ತು ರಾಜ್ಯ ಸದಸ್ಯ ಎ.ರವಿಶಂಕರ ಶೆಟ್ಟಿ ಬಡಾಜೆ ಗುತ್ತು, ಕೆ.ಕೆ. ಶೆಟ್ಟಿ ಕುಂಬ್ಳೆ (ರಾಜರಾಜೇಶ್ವರಿ ದೇವಸ್ಥಾನ) ಅವರು ಅಭಿನಂದನೆ ಸಲ್ಲಿಸಿದರು. ರವಿಶಂಕರ ವಳಕ್ಕುಂಜ ಸನ್ಮಾನ ಸ್ವೀಕರಿಸಿ ಮಾತನಾಡಿ ಬೊಂಡಾಲ ಮನೆತನದವರು ಯಕ್ಷಗಾನ ಹಾಗೂ ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.
ಗ್ರಾಮ‌ ಪಂಚಾಯತ್ ಅಧ್ಯಕ್ಷ ಸಂತೋಷ್ ‌ ಮತ್ತಿತರರು ಉಪಸ್ಥಿತರಿದ್ದರು.


ಬೊಂಡಾಲ ಸಂಸ್ಮರಣೆ ಮತ್ತು ಬಯಲಾಟ ಸಮಿತಿಯ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು. ಸೀತಾರಾಮ ಶೆಟ್ಟಿ ವಂದಿಸಿದರು.
ಬಳಿಕ ಕಟೀಲು ಮೇಳದ‌ ವತಿಯಿಂದ ಶ್ರೀ ದೇವಿ ಮಹಾತ್ಮೆ ಬಯಲಾಟ ಪ್ರದರ್ಶನವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು