4:01 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕಟೀಲು ಮೇಳದ ಹಿರಿಯ ಹಾಸ್ಯಗಾರ ರವಿಶಂಕರ ವಳಕುಂಜರಿಗೆ ಬೊಂಡಾಲ ಪ್ರಶಸ್ತಿ ಪ್ರದಾನ

15/02/2025, 17:48

ಜಯಾನಂದ ಪೆರಾಜೆ ಬಂಟ್ವಾಳ

info.reporterkarnataka@gmail.com

ಕಟೀಲು‌ ಮೇಳದ ತೆಂಕುತಿಟ್ಟಿನ ಹಿರಿಯ ಕಲಾವಿದ, ಹಾಸ್ಯಗಾರ ರವಿಶಂಕರ ವಳಕುಂಜ ಅವರನ್ನು ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ರಾಮಣ್ಣ ಶೆಟ್ಟಿ ಸಂಸ್ಮರಣೆ ಸಮಿತಿ ವತಿಯಿಂದ ಬೊಂಡಾಲ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಶನಿವಾರ ಶಂಬೂರು ಗ್ರಾಮದ ಬೊಂಡಾಲದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಯಕ್ಷಗಾನ ಬಯಲಾಟ ಸೇವೆಯ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಧ್ಯಕ್ಷ ತೆಯಲ್ಲಿ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಗೌರವ ಅತಿಥಿಗಳಾಗಿ ಅನಂತ ಪದ್ಮನಾಭ ಅಸ್ರಣ್ಣ ಕಟೀಲು ಅವರು ಶುಭಹಾರೈಸಿ ಆಶೀರ್ವಚನ ನೀಡಿ ಮಾತನಾಡಿದರು. ಧಾರ್ಮಿಕ ಪರಿಷತ್ತು ರಾಜ್ಯ ಸದಸ್ಯ ಎ.ರವಿಶಂಕರ ಶೆಟ್ಟಿ ಬಡಾಜೆ ಗುತ್ತು, ಕೆ.ಕೆ. ಶೆಟ್ಟಿ ಕುಂಬ್ಳೆ (ರಾಜರಾಜೇಶ್ವರಿ ದೇವಸ್ಥಾನ) ಅವರು ಅಭಿನಂದನೆ ಸಲ್ಲಿಸಿದರು. ರವಿಶಂಕರ ವಳಕ್ಕುಂಜ ಸನ್ಮಾನ ಸ್ವೀಕರಿಸಿ ಮಾತನಾಡಿ ಬೊಂಡಾಲ ಮನೆತನದವರು ಯಕ್ಷಗಾನ ಹಾಗೂ ಕಲಾವಿದರಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.
ಗ್ರಾಮ‌ ಪಂಚಾಯತ್ ಅಧ್ಯಕ್ಷ ಸಂತೋಷ್ ‌ ಮತ್ತಿತರರು ಉಪಸ್ಥಿತರಿದ್ದರು.


ಬೊಂಡಾಲ ಸಂಸ್ಮರಣೆ ಮತ್ತು ಬಯಲಾಟ ಸಮಿತಿಯ ಅಧ್ಯಕ್ಷ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಸ್ವಾಗತಿಸಿ ಪರಿಚಯಿಸಿದರು. ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ನಿರೂಪಿಸಿದರು. ಸೀತಾರಾಮ ಶೆಟ್ಟಿ ವಂದಿಸಿದರು.
ಬಳಿಕ ಕಟೀಲು ಮೇಳದ‌ ವತಿಯಿಂದ ಶ್ರೀ ದೇವಿ ಮಹಾತ್ಮೆ ಬಯಲಾಟ ಪ್ರದರ್ಶನವಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು