3:47 PM Tuesday24 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

Tragady | ದೆಹಲಿ: ಕುಂಭಮೇಳಕ್ಕೆ ಹೊರಟಿದ್ದ ಭಕ್ತಸಮೂಹದ ನಡುವೆ ನೂಕುನುಗ್ಗಲು; ಕಾಲ್ತುಳಿತಕ್ಕೆ ಕನಿಷ್ಠ 18 ಮಂದಿ ಸಾವು

16/02/2025, 09:46

ನವದೆಹಲಿ(reporterkarnataka.com): ಮಹಾ ಕುಂಭಮೇಳಕ್ಕೆ ಸಂಬಂಧಿಸಿದಂತೆ ಮತ್ತೊಂದು ಕಾಲ್ತುಳಿತ ಸಂಭವಿಸಿದೆ. ಆದರೆ ಈ ದುರಂತ ನಡೆದದ್ದು ದೆಹಲಿಯಲ್ಲಿ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಲು ಹೊರಟ ಭಕ್ತಸಮೂಹದ ನಡುವೆ ರೈಲಿಗಾಗಿ ನಡೆದ ನೂಕುನುಗ್ಗಲಿನಲ್ಲಿ ಕಾಲ್ತುಳಿತ ಉಂಟಾಗಿ ಸುಮಾರು 18 ಮಂದಿ ಸಾವನ್ನಪ್ಪಿದ್ದಾರೆ.
ಮೃತಪಟ್ಟವರಲ್ಲಿ 14 ಮಂದಿ ಮಹಿಳೆಯರು, ಇಬ್ಬರು ಮಕ್ಕಳು ಹಾಗೂ ಇಬ್ಬರು ಪುರುಷರು ಸೇರಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ದೆಹಲಿಯ ಕೇಂದ್ರ ರೈಲ್ವೆ ನಿಲ್ದಾಣದ 14 ಮತ್ತು 15ನೇ ಫ್ಲಾಟ್ ಫಾರ್ಮ್ ನಲ್ಲಿ ಈ ಘೋರ ದುರಂತ ಸಂಭವಿಸಿದೆ. ಕಿಕ್ಕಿರಿದು ಸೇರಿದ್ದ ಜನರು ರೈಲು ಹತ್ತಲು ನೂಕು ನುಗ್ಗಲು ನಡೆಸಿರುವುದರಿಂದ ಕಾಲ್ತುಳಿತ ಉಂಟಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು