12:27 AM Friday21 - February 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ… ಲಿಂಗಸುಗೂರ: ಉದ್ಯೋಗ ಖಾತ್ರಿ ಅನುದಾನ ದುರ್ಬಳಕೆ; ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ನಾಗರತ್ನ,…

ಇತ್ತೀಚಿನ ಸುದ್ದಿ

ನಂಜನಗೂಡು: 1 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ

16/02/2025, 19:37

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ದ್ರುವ ನಾರಾಯಣ್ ಚಾಲನೆ ನೀಡಿದರು.
ಕ್ಷೇತ್ರದ ವ್ಯಾಪ್ತಿಗೆ ಬರುವ ಹರದನಹಳ್ಳಿ, ಹುಲ್ಲಹಳ್ಳಿ ಮುಳ್ಳೂರು, ಚಿಕ್ಕ ಕವಲಂದೆ, ಮಲ್ಲಹಳ್ಳಿ ,ನಂಜನಹಳ್ಳಿ ಗ್ರಾಮಗಳಲ್ಲಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದ ಸಿಸಿ ರಸ್ತೆ, ಚರಂಡಿ ,ಅಂಬೇಡ್ಕರ್ ಸಮುದಾಯ ಭವನಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮಕ್ಕೆ ಬಂದ ಶಾಸಕರನ್ನು ಗ್ರಾಮಸ್ಥರು ಶಾಲು ಹೊದಿಸಿ ಮಾಲಾಪಣೆ ಮಾಡಿ ಪಟಾಕಿ ಸಿಡಿಸುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿ ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ ನಮ್ಮ ಸರ್ಕಾರ ಬಂದ 20 ತಿಂಗಳಲ್ಲಿ ನಿಮ್ಮ ಗ್ರಾಮಗಳಿಗೆ ಈಗಾಗಲೇ ಸಾಕಷ್ಟು ಅನುದಾನವನ್ನು ನೀಡಿ ಅಭಿವೃದ್ಧಿಪಡಿಸಲಾಗುತ್ತಿದೆ. ಉಳಿದ ದಿನಗಳಲ್ಲಿ ಇನ್ನು ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡಲಾಗುವುದು. ಇದಕ್ಕೆ ತಮ್ಮೆಲ್ಲರ ಸಹಕಾರ ಹಾಗೂ ಸಮಯ ನೀಡಬೇಕು ಎಂದರು .
ಸಿಎಂ ಸಿದ್ದರಾಮಯ್ಯ ನವರ ಸರ್ಕಾರದಲ್ಲಿ ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಗೂ ಹೆಚ್ಚು ಒತ್ತು ನೀಡಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.


ಇದೇ ಕಾರ್ಯಕ್ರಮಕ್ಕೆ ಬಂದ ಶಾಸಕರಿಗೆ ಗ್ರಾಮಸ್ಥರು ತಮ್ಮ ಗ್ರಾಮಗಳಿಗೆ ಬೇಕಾದ ಸೌಲಭ್ಯ ಹಾಗೂ ವೈಯಕ್ತಿಕವಾಗಿ ಆಗಬೇಕಾದ ಕೆಲಸ ಕಾರ್ಯಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ, ಉಪಾಧ್ಯಕ್ಷ ಲೋಕೇಶ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ ಪಿ ಎ ಸಿ ಸಿ ಬ್ಯಾಂಕ್ ಅಧ್ಯಕ್ಷ ನಾಗೇಶ್ ,ಮುಖಂಡರುಗಳಾದ ಸೋಮೇಶ್,ಶಿವನಂಜ ನಾಯಕ , ಅಭಿನಂದನ್ ,ಮಾದಪ್ಪ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು