3:12 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಸಾಲ ಕಂತು ಬಾಕಿ: ಫ್ರೀಡಂ ಫೈಟರ್ ಪತ್ನಿಯ ಕಿವಿಯೊಲೆ, ಚೈನ್ ಎಗರಿಸಿದ ಬ್ಯಾಂಕ್ ಸಿಬ್ಬಂದಿ!

16/02/2025, 22:37

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಭಾರತ ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲು ಅನುಭವಿಸಿದ ಮಹಾನ್ ದೇಶ ಪ್ರೇಮಿಗಳಿಗೆ ಸರ್ಕಾರ ಪಿಂಚಣಿ ನೀಡುವ ಮೂಲಕ ಅವರ ಕುಟುಂಬದ ಮನೋಸ್ಥೈರ್ಯ ಹೆಚ್ಚಿಸಿ ಅವರನ್ನು ದೇಶದ ಆಸ್ತಿಯೆಂದು ಪರಿಗಣಿಸುತ್ತಿದೆ. ಅಂತಹ ಫ್ರೀಡಂ ಫೈಟರ್ ಪತ್ನಿಗೆ ಲೋನ್ ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಬ್ಯಾಂಕ್ ನವರು ಮಂಗಮಾಯ ಮಾಡಿರುವ ಘಟನೆ ತಾಲ್ಲೂಕಿನ ಕೋಣಂದೂರಿನಲ್ಲಿ ನಡೆದಿದೆ.
ತಾಲೂಕಿನ ಬಿಲ್ಲೇಶ್ವರ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಎಸ್ ಚನ್ನವೀರಪ್ಪನವರ ಪತ್ನಿ ಹಾಲಮ್ಮನವರಿಗೆ ಕಳೆದ ನಾಲ್ಕೈದು ತಿಂಗಳುಗಳಿಂದ ಪಿಂಚಣಿ ಹಣ ಬರುತ್ತಿಲ್ಲ ಇದರ ನಡುವೆ ಈ ಹಿಂದೆ ಮನೆ ದುರಸ್ಥಿಗೆಂದು ಪಿಂಚಣಿ ಹಣದ ಆಧಾರದ ಮೇಲೆ ಮಾಡಿದ್ದ ಲೋನ್ ನ ಒಂದು ಕಂತು ಕಟ್ಟಿಲ್ಲವೆಂದು ಕಿವಿಯಲ್ಲಿದ್ದ ಓಲೆಯನ್ನು ಪಡೆದು 86 ರ ವಯೋವೃದ್ದೆಗೆ ನಿಂದಿಸಿ ಹೊರದಬ್ಬಿರುವ ಬಗ್ಗೆ ಕೋಣಂದೂರು ಉಪಠಾಣೆಯಲ್ಲಿ ದೂರು ದಾಖಲಾಗಿದೆ.
ಪಿಂಚಣಿ ಹಣದ ಆಧಾರದ ಮೇಲೆ ಮನೆ ದುರಸ್ಥಿಗೆ ಕೋಣಂದೂರು ಕೆನರಾ ಬ್ಯಾಂಕ್ ನಲ್ಲಿ ಸಾಲ ಪಡೆದಿದ್ದ ವೃದ್ದೆ ಕಳೆದ ನಾಲ್ಕು ತಿಂಗಳುಗಳಿಂದ ಪಿಂಚಣಿ ಹಣ ಬಂದಿಲ್ಲ ಈ ಹಿನ್ನಲೆಯಲ್ಲಿ ಲೋನ್ ತೀರುವಳಿ ಮಾಡಿರಲಿಲ್ಲ ಹಾಗೇಯೇ ಫೆಬ್ರವರಿ 10 ರಂದು ಮನೆಯಲ್ಲಿ ರೇಷನ್ ಕೊರತೆಯ ಕಾರಣ ಕಿವಿಯಲ್ಲಿದ್ದ ಓಲೆ ಚೈನ್ ನ್ನು ಅಡವಿಡಲು ಬ್ಯಾಂಕ್ ಗೆ ಬಂದರೇ ಕಲ್ಲು ಮನಸ್ಸಿನ ಬ್ಯಾಂಕ್ ಅಧಿಕಾರಿಗಳು ಚೈನ್ ನ್ನು ಪಡೆದು ಹಣ ನೀಡದೇ ಅವಾಚ್ಯವಾಗಿ ಏಕವಚನದಲ್ಲಿ ನಿಂದಿಸಿ ಹೊರದಬ್ಬಿದ್ದಾರೆ ಎಂದು ವೃದ್ದೆಯ ಮಗಳು ಶಕುಂತಳಾ ಆರೋಪಿಸಿದ್ದಾರೆ.
ಬಿಲ್ಲೇಶ್ವರ ಗ್ರಾಮದ ಎಸ್ ಚನ್ನವೀರಪ್ಪ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿ ದೇಶಸೇವೆ ಮಾಡುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅವರ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಆದರೆ ನಮ್ಮನ್ನು ಸರ್ಕಾರಗಳು ಹಾಗೂ ವ್ಯವಸ್ಥೆ ಇಷ್ಟು ನಿಕೃಷ್ಟವಾಗಿ ಕಾಣುತ್ತಿರುವುದು ಬೇಸರದ ಸಂಗತಿ ಎಂದು 87ರ ಹರೆಯದ ವೃದ್ದೆ ಹಾಲಮ್ಮ ತಮ್ಮ ನೋವನ್ನು ತೋಡಿಕೊಂಡರು.

ಇತ್ತೀಚಿನ ಸುದ್ದಿ

ಜಾಹೀರಾತು