11:34 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು