6:47 PM Saturday22 - February 2025
ಬ್ರೇಕಿಂಗ್ ನ್ಯೂಸ್
ಕಂದಾಯ ಇಲಾಖೆ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯ ಕೋಟ್ಯಂತರ ಹಣ ಗುಳುಂ: ಬ್ಯಾಂಕ್ ಮೆನೇಜರ್… ಬೆಂಗಳೂರಿನ ಅಭಿವೃದ್ಧಿ ಸೊನ್ನೆ, ಬಿಬಿಎಂಪಿ ಚುನಾವಣೆ ನಡೆಸಿ: ಸರಕಾರಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್… ಬಾಳೆ ಬೆಳೆಗೆ ದೃಷ್ಟಿ ತಾಗದಂತೆ ಅರೆಬೆತ್ತಲೆ ಮಾಡಲ್ ಗಳ ಫೋಟೋ ಅಳವಡಿಸಿದ ಕಿಲಾಡಿ… ಹಾವೇರಿ ಜಾನಪದ ವಿಶ್ವವಿದ್ಯಾಲಯ ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ?: ರಾಜಕೀಯ ಕರಿನೆರಳು.!? State Budget | ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ… Deeptech & AI | ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು ನವೋದ್ಯಮಗಳಿಗೆ ನೆರವು: ಸಚಿವದ್ವಯರಾದ… ಇಂದಿರಾ ಕ್ಯಾಂಟಿನಿನಲ್ಲಿ ಕಳಪೆ ಗುಣಮಟ್ಟದ ಆಹಾರ: ಗುತ್ತಿಗೆ ರದ್ದುಪಡಿಸಲು ಕರವೇ ಒತ್ತಾಯ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬ್ಲಾಕ್ ಪೇಪರ್ ಬಿಡುಗಡೆ: ಮಾಜಿ ಸಿಎಂ ಬಸವರಾಜ… Lokayukta | ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್ ಚಿಟ್ ನಿರೀಕ್ಷಿತ: ಹುಬ್ಬಳ್ಳಿಯಲ್ಲಿ ಕೇಂದ್ರ… ನಂಜನಗೂಡು: ಆಹಾರ ಸುರಕ್ಷತಾ ಅಧಿಕಾರಿಗಳಿಂದ ಹೋಟೆಲ್ ಗಳಿಗೆ ದಿಢೀರ್ ದಾಳಿ; ಇಡ್ಲಿ ತಯಾರಿಕೆಯಲ್ಲಿ…

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು