11:04 PM Friday18 - April 2025
ಬ್ರೇಕಿಂಗ್ ನ್ಯೂಸ್
Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ…

ಇತ್ತೀಚಿನ ಸುದ್ದಿ

ನಂಜನಗೂಡು: ಅಪ್ಪನ ಅವಧಿಯ ಅಪೂರ್ಣ ಕಾಮಗಾರಿ ಪೂರ್ಣಗೊಳಿಸಿದ ಪುತ್ರ; ಕೊನೆಗೂ ಬಸ್ ನಿಲ್ದಾಣ ಉದ್ಘಾಟನೆ

16/02/2025, 22:40

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತಂದೆ ಧ್ರುವನಾರಾಯಣ್ ಅವರು ಅನುದಾನ ನೀಡಿ ಅರ್ಧಂಬರ್ಧಗೊಂಡಿದ್ದ ಕಾಮಗಾರಿಗೆ ಮಗ ದರ್ಶನ್ ಧ್ರುವನಾರಾಯಣ್ ಮತ್ತಷ್ಟು ಅನುದಾನ ನೀಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟಿಸಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದ ದಿವಂಗತ ಆರ್. ಧ್ರುವನಾರಾಯಣ್ ಅವರು ತಮ್ಮ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲೂಕಿನ ಹರದನಹಳ್ಳಿ ಗ್ರಾಮದ ಬಸ್ ನಿಲ್ದಾಣಕ್ಕೆ 2017ರ ತಮ್ಮ ಅವಧಿಯಲ್ಲಿ 5 ಲಕ್ಷ ಅನುದಾನ ನೀಡಿ ಅದರಲ್ಲಿ 3 ಲಕ್ಷ ಹಣವನ್ನು ಮಂಜೂರು ಸಹ ಮಾಡಿಸಿದ್ದರು.
3 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭಗೊಂಡು ಬಸ್ ನಿಲ್ದಾಣದ ಕಾಮಗಾರಿ ಸುಮಾರು ಏಳು ವರ್ಷದಿಂದ ಅರ್ಧಕ್ಕೆ ನಿಂತು ಹೋಗಿತ್ತು.


ಅವರ ನಂತರ ಬಂದ ಬಿಜೆಪಿಯ ಸಂಸದರಾಗಲಿ, ಶಾಸಕರಾಗಲಿ ಇದಕ್ಕೆ ಯಾವುದೇ ಹಣ ಬಿಡುಗಡೆ ಮಾಡದೆ ಇದ್ದ ಕಾರಣ ಕಾಮಗಾರಿಯು ಅರ್ಧಕ್ಕೆ ನಿಂತುಹೋಗಿತ್ತು. ಅವರ ನಿಧನದ ನಂತರ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಅವರ ಮಗ ದರ್ಶನ್ ಧ್ರುವನಾರಾಯಣ್ ಅವರೇ ಶಾಸಕರಾಗಿ ಆಯ್ಕೆಯಾದರು.
ತಂದೆ ಧ್ರುವನಾರಾಯಣ್ ಅವರ ಅನುದಾನದಲ್ಲಿ ಅರ್ಧಕ್ಕೆ ನಿಂತಿದ ಬಸ್ ನಿಲ್ದಾಣದ ಮುಂದುವರೆದ ಕಾಮಗಾರಿಗೆ ಮಗ ಶಾಸಕ ದರ್ಶನ್ ಧ್ರುವನಾರಾಯಣ್ ಅವರು 5 ಲಕ್ಷ ರೂಪಾಯಿ ಮಂಜೂರು ಮಾಡಿ ಕಾಮಗಾರಿಯನ್ನು ಪೂರ್ಣಗೊಳಿಸಿ ಗ್ರಾಮಕ್ಕೆ ಸುಸಜ್ಜಿತ ಬಸ್ ನಿಲ್ದಾಣ ಮಾಡಿಸಿಕೊಡುವ ಮೂಲಕ ಗ್ರಾಮಸ್ಥರ ಪ್ರಸಂಸೆ
ಗೆ ಪಾತ್ರರಾರಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು