11:27 PM Saturday17 - January 2026
ಬ್ರೇಕಿಂಗ್ ನ್ಯೂಸ್
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ…

ಇತ್ತೀಚಿನ ಸುದ್ದಿ

Local Politics | ಪಾಳೆಗಾರ ಅಲ್ಲ, ಕ್ಷೇತ್ರದ ಕಾವಲುಗಾರ: ಉಸ್ತುವಾರಿ ಸಚಿವರ ಹೇಳಿಕೆಗೆ ಶಾಸಕ ವೇದವ್ಯಾಸ ಕಾಮತ್ ತಿರುಗೇಟು

17/02/2025, 19:13

ಮಂಗಳೂರು(reporterkarnataka.com):“ಶಾಸಕ ವೇದವ್ಯಾಸ ಕಾಮತ್ ಏನು ಇಲ್ಲಿನ ಪಾಳೇಗಾರನ” ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಕೇಳಿದ್ದಕ್ಕೆ ನಾನು ಉತ್ತರ ಕೊಡುವುದಿಲ್ಲ. ಬದಲಿಗೆ “ಪಾಳೆಗಾರ ಅಲ್ಲ ಕಾವಲುಗಾರ” ಎಂದು ಕ್ಷೇತ್ರದ ಜನತೆಯೇ ಉತ್ತರ ಕೊಟ್ಟಿದ್ದಾರೆ. ಅದನ್ನು ಅವರು ಮೊದಲು ಅರಗಿಸಿಕೊಳ್ಳಲಿ ಸಾಕು ಎಂದು ಶಾಸಕ ವೇದವ್ಯಾಸ ಕಾಮತ್ ತಿರುಗೇಟು ನೀಡಿದ್ದಾರೆ.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಪರಿಶಿಷ್ಟ ಸಮುದಾಯದ ಮೇಯರ್ ರವರು ಜಿಲ್ಲಾಡಳಿತ ಹಾಗೂ ಪಾಲಿಕೆಯ ಹಿರಿಯ ಅಧಿಕಾರಿಗಳಿಗೆ, ಮಾಹಿತಿ ನೀಡಿಯೇ ಮಂಗಳಾದೇವಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಉದ್ಘಾಟನೆ ನಡೆಸಿದ್ದು ಕಾಂಗ್ರೆಸ್ಸಿಗರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ಮರು ಉದ್ಘಾಟನೆ ಮಾಡಿ ತಮ್ಮ ನಿಜ ಮಾನಸಿಕತೆಯನ್ನು ತೋರಿಸಿದ್ದಾರೆ. ಇದು ಇಡೀ ಪರಿಶಿಷ್ಟ ಸಮುದಾಯಕ್ಕಾದ ಅವಮಾನವಾಗಿದೆ ಎಂದರು.
ಆರೋಗ್ಯ ಕೇಂದ್ರದಲ್ಲಿದ್ದ ಬಡ ರೋಗಿಗಳನ್ನು ಹೊರದಬ್ಬಿ, ಕೇವಲ ನಾಲ್ಕೇ ದಿನಕ್ಕೆ ಬೀಗ ಹಾಕಿ, ಸ್ವಪ್ರತಿಷ್ಠೆ ಹಾಗೂ ರಾಜಕೀಯಕ್ಕಾಗಿ ಮರು ಉದ್ಘಾಟನೆ ಎಂಬ ಹೊಸ ಮತ್ತು ಕೆಟ್ಟ ಸಂಪ್ರದಾಯಕ್ಕೆ ನಾಂದಿ ಹಾಡಿದ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ಕಾಂಗ್ರೆಸ್ಸಿಗೆ ಕಿಂಚಿತ್ತಾದರೂ ಶೋಭೆ ಇದೆಯೇ? ಈಗ ಈ ಗೊಂದಲಕ್ಕೆ ಶಾಸಕರೇ ಕಾರಣ ಎಂದು ಆರೋಪಿಸುವ ಬದಲು, ಹೇಗೂ ನಿಮ್ಮದೇ ಸರ್ಕಾರವಿದೆ, ಮಂಗಳಾದೇವಿಯ ಆರೋಗ್ಯ ಕೇಂದ್ರದ ಉದ್ಘಾಟನೆ ವಿಷಯದಲ್ಲಿ ನಾನು ಅಟೆಂಡರ್ ನಿಂದ ಹಿಡಿದು ಜಿಲ್ಲಾಧಿಕಾರಿಯವರೆಗೆ ಯಾವನೇ ಒಬ್ಬನಿಗೆ ಕರೆ ಮಾಡಿದ್ದರೂ ತನಿಖೆ ಮಾಡಿಸಿ ನೋಡೋಣ. ಇಲ್ಲದಿದ್ದರೆ ನಿಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಿ ಎಂದು ಸವಾಲು ಹಾಕಿದರು.

ಶಿಷ್ಟಾಚಾರದ ಪ್ರಕಾರ ಮರು ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿದ್ದೇವೆ ಎನ್ನುತ್ತಿರುವ ಕಾಂಗ್ರೆಸ್ಸಿಗರು ವೇದಿಕೆಯಲ್ಲಿ ಮಾಜಿ ಶಾಸಕರ ಸಹಿತ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಿದ್ದು ಯಾವ ಶಿಷ್ಟಾಚಾರ? ಇದೇ ಪ್ರಕಾರ ಹೋದರೆ, ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಜಿಲ್ಲೆಗೆ ಸಮಯವನ್ನು ಕೊಡುವುದಿಲ್ಲ. ಹಾಗಾದರೆ ನಾವು ಕೂಡ ಉಳಿದ ಕಾರ್ಯಕ್ರಮಗಳಿಗೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆ ತರಬಹುದೇ? ಎಂದು ತರಾಟೆಗೆ ತೆಗೆದುಕೊಂಡರು.
ಪತ್ರಿಕಾಗೋಷ್ಠಿಯಲ್ಲಿ ರಮೇಶ್ ಕಂಡೆಟ್ಟು, ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಭಾನುಮತಿ, ಮನಪಾ ಸದಸ್ಯೆ ಪೂರ್ಣಿಮಾ, ರವಿಶಂಕರ್ ಮಿಜಾರ್
ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು